
ಬೆಂಗಳೂರು (ಡಿ.08): ರವಿ ಬೆಳಗೆರೆ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪರ ವಕೀಲರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಕರಣದ ಎಲ್ಲಾ ಅಂಶಗಳು ಕೂಡಾ ಸತ್ಯಕ್ಕೆ ದೂರವಾಗಿದ್ದು. ನ್ಯಾಯಾಲಯದಲ್ಲಿ ಹೋರಾಟ ಮಾಡುತ್ತೇವೆ. ತನಿಖೆಗೆ ಎಲ್ಲಾ ಸಹಕಾರವನ್ನು ರವಿ ಬೆಳಗೆರೆ ಣೀಡುತ್ತಾರೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ವಿಶ್ವಾಸವಿದೆ. ಪೊಲೀಸ್ ವ್ಯವಸ್ಥೆಯಲ್ಲಿ ನಂಬಿಕೆಯಿದೆ. ಅವರು ನಡೆಸುವ ಎಲ್ಲಾ ವಿಚಾರಣೆ. ತನಿಖೆಗೆ ಸಹಕರಿಸಲು ರವಿ ಬೆಳಗೆರೆಯವರು ಸಿದ್ಧರಿದ್ದಾರೆ ಎಂದು ರವಿ ಬೆಳಗೆರೆ ಪರ ವಕೀಲರು ಹೇಳಿದ್ದಾರೆ.
ರವಿ ಬೆಳಗೆರೆಯನ್ನು ನ್ಯಾಯಾಲಯಕ್ಕೆ ಇನ್ನು ಕೆಲವೇ ಕ್ಷಣಗಳಲ್ಲಿ ಹಾಜರುಪಡಿಸಲು ಸಿಸಿಬಿ ಪೊಲೀಸರು ಕರೆದೊಯ್ದಿದ್ದಾರೆ. ಅವರ ಜೊತೆ ಪುತ್ರಿ ಚೇತನಾ ಬೆಳಗೆರೆ ಇದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.