ರಾತ್ರಿಪೂರ್ತಿ ಸಿಸಿಬಿ ಕಚೇರಿಯಲ್ಲೇ ರವಿ ಬೆಳಗೆರೆ ವಾಸ್ತವ್ಯ

Published : Dec 09, 2017, 07:19 AM ISTUpdated : Apr 11, 2018, 12:54 PM IST
ರಾತ್ರಿಪೂರ್ತಿ ಸಿಸಿಬಿ ಕಚೇರಿಯಲ್ಲೇ ರವಿ ಬೆಳಗೆರೆ ವಾಸ್ತವ್ಯ

ಸಾರಾಂಶ

ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ ಬೆಳಗೆರೆ  ಅವರು ರಾತ್ರಿ ಪೂರ್ತಿ ಚಾಮರಾಜಪೇಟೆಯ ಸಿಸಿಬಿ ಕಚೇರಿಯಲ್ಲಿ ವಾಸ್ತವ್ಯ ಹೂಡಿದ್ದರು.

ಬೆಂಗಳೂರು(ಡಿ.9): ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ ಬೆಳಗೆರೆ  ಅವರು ರಾತ್ರಿ ಪೂರ್ತಿ ಚಾಮರಾಜಪೇಟೆಯ ಸಿಸಿಬಿ ಕಚೇರಿಯಲ್ಲಿ ವಾಸ್ತವ್ಯ ಹೂಡಿದ್ದರು.

ಅವರ ಮಕ್ಕಳಾದ ಚೇತನ ಹಾಗೂ ಕರ್ಣ ಕೂಡ ಅವರೊಂದಿಗೆ ಇದ್ದರು ಎನ್ನಲಾಗಿದೆ. ಅವರನ್ನು 1ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಪೊಲೀಸರು ಅಲ್ಲಿಯೇ ಅವರ ವಿಚಾರಣೆ ನಡೆಸಿದ್ದಾರೆ. ಒಟ್ಟು ನಾಲ್ಕು ದಿನಗಳ ಕಾಲ ಸಿಸಿಬಿ ಪೊಲೀಸರ ವಶದಲ್ಲಿ  ಇರಿಸಲಾಗಿದೆ.

ಇದರಿಂದ ಸದ್ಯಕ್ಕೆ ಬೆಳೆಗೆರೆಗೆ ಬೇಲ್ ಸಿಗುವ ಸಾಧ್ಯತೆಗಳು ಕಡಿಮೆ ಎನ್ನಲಾಗಿದೆ. ಅನಾರೋಗ್ಯದಿಂದ ಬಳಲುತ್ತಿರುವ ಬೆಳೆಗೆರೆ ಅವರು ಜಾಮೀನು ಕೋರಿಕೆಯನ್ನೂ ಕೂಡ ನ್ಯಾಯಾಧೀಶರು ತಿರಸ್ಕರಿಸಿದ್ದಾರೆ. ಅಲ್ಲದೇ ಜೈಲು ವಾರ್ಡ್’ನಲ್ಲಿ ಇರಿಸಲೂ ಕೂಡ ನ್ಯಾಯಾಧೀಶರು ನಿರಾಕರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಸೀಮಂತ ಸಂಭ್ರಮ; ಶಾಸ್ತ್ರಬದ್ಧ ಸಂಪ್ರದಾಯ ಆಚರಣೆ!
ಗೋವಾ ದುರಂತದಿಂದ ಎಚ್ಚೆತ್ತ ಪೊಲೀಸ್, ಹೊಸವರ್ಷಕ್ಕೆ ಕ್ಲಬ್, ಬಾರ್, ಪಬ್‌ಗಳಲ್ಲಿ ಪಟಾಕಿ ಆಚರಣೆ ಬ್ಯಾನ್