
ಭಾರತದ ಕ್ರಿಕೆಟ್ ತಂಡದ ಆಲ್'ರೌಂಡರ್ ಆಟಗಾರ ರವೀಂದ್ರ ಜಡೇಜಾ ಚಲಾಯುಸುತ್ತಿದ್ದ ಕಾರಿಗೆ ಸಿಲುಕಿ ಯುವತಿಯೊಬ್ಬಳು ಗಾಯಗೊಂಡ ಘಟನೆ ಗುಜರಾತಿನ ಜಾಮ್ನನಗರ್' ಜಿಲ್ಲೆಯಲ್ಲಿ ನಡೆದಿದೆ.
ರವೀಂದ್ರ ಜಡೇಜಾ ತಮ್ಮ ಪತ್ನಿ ರೇವಾ ಸೋಲಂಕಿ ಜೊತೆ ಕಾರಿನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಇವರ ಕಾರು ದ್ವಿಚಕ್ರ ವಾಹನದಲ್ಲಿ ಚಲಾಯಿಸುತ್ತಿದ್ದ ಪ್ರೀತಿ ಶರ್ಮಾ ಎಂಬ ವಿದ್ಯಾರ್ಥಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿಯನ್ನು ಜಡೇಜಾ ಅವರೇ ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಯುವತಿ ಚೇತರಿಸಿಕೊಂಡಿದ್ದಾಳೆ. ಅಪಘಾತಕ್ಕೆ ರವೀಂದ್ರ ಜಡೇಜಾ ಅವರು ಕಾರಣರಲ್ಲ ಎಂಬುದು ಸ್ಥಳೀಯ ಮೂಲಗಳಿಂದ ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.