
ನವದೆಹಲಿ (ನ.28): ನೋಟು ಅಮಾನ್ಯ ಕ್ರಮಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ವಿರುದ್ಧ ಹರಿಹಾಯ್ದಿರುವ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್, ವಿಪಕ್ಷಗಳು ಅನಗತ್ಯವಾಗಿ ಸಂಸತ್ತಿನ ಕಲಾಪಗಳಿಗೆ ಅಡ್ಡಿಯನ್ನುಂಟು ಮಾಡುತ್ತಿವೆ ಎಂದಿದ್ದಾರೆ.
ದೇಶದ ಜನತೆ ಸರ್ಕಾರದ ಕ್ರಮವನ್ನು ಬೆಂಬಲಿಸುತ್ತಿದೆ ಎಂದಿರುವ ರವಿಶಂಕರ್ ಪ್ರಸಾದ್, ವಿಪಕ್ಷಗಳು ಆಚರಿಸುತ್ತಿರುವ ಆಕ್ರೋಶ ದಿವಸಕ್ಕೆ ಯಾವುದೇ ಮಹತ್ವವಿಲ್ಲವೆಂದು ಹೇಳಿದ್ದಾರೆ.
ಸರ್ಕಾರ ಅಪಮೌಲ್ಯೀಕರಣ ಕುರಿತು ಚರ್ಚೆ ನಡೆಸಲು ಸಿದ್ಧವಿದೆ. ವಾಸ್ತವದಲ್ಲಿ ಪ್ರತಿಪಕ್ಷಗಳಿಗೆ ಆ ಕುರಿತು ಚರ್ಚೆ ಬೇಕಾಗಿಲ್ಲ, ಆದುದರಿಂದಲೇ, ಅವುಗಳು ಸಂಸತ್ತಿನಲ್ಲಿ ಅನಗತ್ಯವಾಗಿ ಕೊಲಾಹಲ ಸೃಷ್ಟಿಸುತ್ತಿವೆ ಎಂದು ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ನೋಟು ನಿಷೇಧದಿಂದಾಗಿ ಈಗಾಗಲೇ ದೇಶದಲ್ಲಿ 70ಕ್ಕಿಂತ ಹೆಚ್ಚು ಮಂದಿ ಮೃತಪಟ್ಟಿದ್ದಾರೆ, ಹಾಗೂ ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಪ್ರಧಾನಿ ಸದನದಲ್ಲಿ ಬಂದು ಉತ್ತರಿಸುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.