
ಉಡುಪಿ(ಆ.21): ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಹತ್ಯೆಗೈದು ಹೋಮಕುಂಡದಲ್ಲಿ ದಹಿಸಿದ್ದ ಆರೋಪಿಗಳಿಗೆ, ವಿಐಪಿ ಟ್ರೀಟ್ ಮೆಂಟ್ ಕೊಡಲಾಗ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ ಶೆಟ್ಟಿ, ಹಾಗೂ ನಿರಂಜನ ಭಟ್ ಹತ್ಯೆ ಆರೋಪಿಗಳಾಗಿದ್ದು, ಮಂಗಳೂರು ಕಾರಾಗೃಹದಿಂದ ಖಾಸಗಿ ಇನ್ನೊವಾ ಕಾರಿನಲ್ಲಿ ಮೂವರು ಆರೋಪಿಗಳು ಉಡುಪಿಗೆ ಬಂದಿದ್ದಾರೆ.
ಸರ್ಕಾರಿ ವಾಹನದ ಬದಲಿಗೆ ಖಾಸಗಿ ಟೂರಿಸ್ಟ್ ಇನ್ನೋವಾ ಕಾರು ಬಳಕೆ ಮಾಡಿರುವುದು ಕೆಂಗಣ್ಣಿಗೆ ಗುರಿಯಾಗಿದೆ. ಹತ್ಯೆ ಆರೋಪಿಗಳನ್ನು ಪೊಲೀಸ್ ವಾಹನದಲ್ಲಿ ಕರೆತರಬೇಕು, ಆದರೆ ಖಾಸಗಿ ಇನ್ನೋವಾದಲ್ಲಿ ಕರೆತಂದಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.