ಬೆಳಗ್ಗೆ 9 ಗಂಟೆ ಒಳಗೆ ಕಚೇರಿಗೆ ಬಾರದಿದ್ದರೆ ವೇತನ ಕಟ್

Published : Jun 29, 2019, 11:15 AM IST
ಬೆಳಗ್ಗೆ 9 ಗಂಟೆ ಒಳಗೆ ಕಚೇರಿಗೆ ಬಾರದಿದ್ದರೆ ವೇತನ ಕಟ್

ಸಾರಾಂಶ

ಕಚೇರಿಗೆ 9 ಗಂಟೆ ಒಳಗೆ ಆಗಮಿಸಬೇಕು.ಇಲ್ಲವಾದಲ್ಲಿ ವೇತನ ಕಟ್ ಆಗಲಿದೆ. ಹೀಗೆಂದು ಮುಖ್ಯಮಂತ್ರಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಲಖನೌ [ಜೂ.29] : ಕಚೇರಿಯಲ್ಲಿ ಆಲಸ್ಯ, ನಿರಾಸಕ್ತಿ ಮತ್ತು ತಡವಾಗಿ ಬರುವ ಸರ್ಕಾರಿ ನೌಕರರಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ ನೀಡಿದ್ದಾರೆ! ಸರ್ಕಾರಿ ನೌಕರರ ಮೇಲೆ ಹದ್ದಿನಕಣ್ಣು ನೆಟ್ಟಿರುವ ಸಿಎಂ ಯೋಗಿ ಕಚೇರಿ ಇದೀಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ಬೆಳಗ್ಗೆ 9  ಗಂಟೆಗೆ ಕಚೇರಿಯಲ್ಲಿ ಹಾಜರಿರಲು ಆದೇಶಿಸಲಾಗಿದ್ದು, ತಡವಾಗಿ ಬಂದರೆ ಶಿಸ್ತು ಕ್ರಮದ ಜೊತೆಗೆ ವೇತನಕ್ಕೂ ಕತ್ತರಿ ಹಾಕುವುದಾಗಿ ಎಚ್ಚರಿಸಿದೆ. 

ಅಲ್ಲದೆ, ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಮತ್ತು ಪೊಲೀಸ್ ಮುಖ್ಯಸ್ಥರು ಬೆಳಗ್ಗೆ 9 ರಿಂದ 11  ಗಂಟೆ ತನಕ ಕಡ್ಡಾಯವಾಗಿ ಸಾರ್ವಜನಿಕರ ಭೇಟಿಗೆ ಮೀಸಲಿಡಬೇಕೆಂದು ಆದೇಶಿಸಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!