
ನವದೆಹಲಿ[ಜೂ.13]: ‘ಕಚೇರಿಗೆ ಸರಿಯಾಗಿ 09.30ಕ್ಕೆ ಬರಬೇಕು. ಮನೆಯಿಂದ ಕೆಲಸ ಮಾಡುವುದನ್ನು ಆದಷ್ಟುಕಡಿಮೆ ಮಾಡಿ ಇತರರಿಗೆ ಮಾದರಿಯಾಗಬೇಕು’ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಪುಟದ ನೂತನ ಸಚಿವರಾಗಿ ಬೋಧನೆ ಮಾಡಿದ ಪಾಠದ ಸಾರಾಂಶವಿದು.
ತಮ್ಮ ಸಂಪುಟದ ಸಚಿವರ ಜೊತೆ ಬುಧವಾರ ಮೊದಲ ಸಭೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ‘ರಾಜ್ಯ ಸಚಿವರ ವೈಖರಿಗೆ ಹೆಚ್ಚಿನ ಒತ್ತು ನೀಡಬೇಕು. ಕ್ಯಾಬಿನೆಟ್ ಸಚಿವರಾದವರು ರಾಜ್ಯ ಸಚಿವರ ಜೊತೆಗೆ ಮುಖ್ಯವಾದ ಕಡತಗಳ ಬಗ್ಗೆ ಮಾಹಿತಿ ಹಂಚಿಕೊಳ್ಳಬೇಕು. ಇದರಿಂದ ಉತ್ಪಾದಕತೆ ಹೆಚ್ಚಲಿದೆ. ಅಲ್ಲದೆ, ಕೆಲವು ಪ್ರಸ್ತಾಪನೆಗಳ ಬಗ್ಗೆ ತೀರ್ಮಾನ ಕೈಗೊಳ್ಳಲು ಕ್ಯಾಬಿನೆಟ್ ಮತ್ತು ಕಿರಿಯ ಸಚಿವರು ಜತೆಗೂಡಿಕೊಂಡು ಚರ್ಚಿಸಬೇಕು’ ಎಂದು ಸೂಚನೆ ನೀಡಿದರು ಎಂದು ಮೂಲಗಳು ತಿಳಿಸಿವೆ.
ಸಚಿವರು ಪಕ್ಷದ ಹಾಗೂ ರಾಜ್ಯದ ಸಂಸದರ ಜೊತೆಗೂ ನಿಯಮಿತವಾಗಿ ಸಭೆಗಳನ್ನು ನಡೆಸಬೇಕು. ತಮ್ಮ ಸರ್ಕಾರದ ಅವಧಿಯಲ್ಲಿ ಸಚಿವರು ಹಾಗೂ ಸಂಸದರ ನಡುವೆ ಹೆಚ್ಚು ವ್ಯತ್ಯಾಸವಿರುವುದಿಲ್ಲ ಎಂದು ಮೋದಿ ಅವರು ಇದೇ ವೇಳೆ ಪ್ರತಿಪಾದಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.