
ನವದೆಹಲಿ (ಅ.04): ಗಡಿ ಪ್ರದೇಶದಲ್ಲಿ ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ನಡೆಸಲು ಭಾರತೀಯ ವಾಯುಸೇನೆ ಸಜ್ಜಾಗಿದೆ ಎಂದು ವಾಯುಸೇನಾ ಮುಖ್ಯಸ್ಥ ಬಿ ಎಸ್ ಧಾನೋವಾ ಹೇಳಿದ್ದಾರೆ. ಸರ್ಜಿಕಲ್ ದಾಳಿಯ ಬಗ್ಗೆ ಸೇನೆಯ ನಿರ್ಧಾರವನ್ನು ಸರ್ಕಾರವೇ ತೆಗೆದುಕೊಳ್ಳಲಿದೆ ಎಂದಿದ್ದಾರೆ.
ವಾಯುಸೇನಾ ದಿನವಾದ ಇಂದು, ಮಾಧ್ಯಮ ಸುದ್ದಿಗೋಷ್ಟಿಯನ್ನುದ್ದೇಶಿಸಿ, ಗಡಿಯುದ್ದಕ್ಕೂ ಕಾರ್ಯಾಚರಣೆ ನಡೆಸಲು, ಸರ್ಜಿಕಲ್ ದಾಳಿ ನಡೆಸಲು ವಾಯುಸೇನೆ ಸಮರ್ಥವಾಗಿದೆ. ನಾವು ಯಾವುದೇ ಸವಾಲನ್ನು ಎದುರಿಸಲು ಸನ್ನದ್ಧವಾಗಿದ್ದೇವೆ ಎಂದು ಧಾನೋವಾ ಹೇಳಿದ್ದಾರೆ.
ಪದೇ ಪದೇ ಗಡಿ ವಿಚಾರದಲ್ಲಿ ಖ್ಯಾತೆ ತೆಗೆಯುವ ಚೀನಾ, ಹಾಗೂ ಪಾಕಿಸ್ತಾನ ಒಂದು ಬೆದರಿಕೆಯೊಡ್ಡಿದರೆ ಉಭಯ ದೇಶಗಳೊಂದಿಗೆ ದ್ವಿಮುಖ ಯುದ್ಧ ಮಾಡಲು ನಾವು ತಯಾರಿದ್ದೇವೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.