
ವಿಜಯಪುರ (ಮಾ.19): ಡೈರಿ ಪ್ರಕರಣವನ್ನು ಸಿಬಿಐಗೆ ನೀಡಲು ನಾವು ಸಿದ್ಧವೆಂದು ವಿಧಾನ ಪರಿಷತ್ ನಾಯಕ ಕೆ ಎಸ್ ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್'ನವರಿಗೆ ಸರಿಯಾಗಿ ಸುಳ್ಳು ಹೇಳಲೂ ಬರುವುದಿಲ್ಲ. ಸಹಾರಾ ಪ್ರಕರಣದಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಅವರಿಗೆ ಕಪ್ಪ ನೀಡಿ ದ್ದಾರೆ. ಹೀಗಾಗಿ ಆ ಪ್ರಕರಣವನ್ನು ಸಿಬಿಐಗೆ ನೀಡಿ ಎಂದು ವಾದಿಸ್ತಿದ್ದಾರೆ. ಆದರೆ ಆಗ ಮೋದಿ ಅವರು ಪ್ರಧಾನಿಯಾಗನೂ ಇರಲಿಲ್ಲ. ಅಮಿತ್ ಷಾ ಅವರು ರಾಷ್ಟ್ರಾಧ್ಯಕ್ಷರೂ ಇರಲಿಲ್ಲವೆಂದು ಈಶ್ವರಪ್ಪ ಲೇವಡಿ ಮಾಡಿದ್ದಾರೆ.
ಹಾಗಂತ ನಾವು ಸಮರ್ಥಿಸಿಕೊಳ್ಳುತ್ತಿಲ್ಲ. ಎರಡೂ ಡೈರಿ ಪ್ರಕರಣಗಳನ್ನು ಸಿಬಿಐ ತನಿಖೆಗೊಳಪಡಿಸಲು ನಾವೂ ಸಿದ್ಧರಿದ್ದೇವೆಯೆಂದು ಈಶ್ವರಪ್ಪ ಹೇಳಿದ್ದಾರೆ. ಇದೇ ವೇಳೆ ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲವು ಖಚಿತವೆಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.