ರಾಜೀನಾಮೆ ನೀಡಲು ಮುಂದಾದ ಅತೃಪ್ತರು, ಯಾರಿದ್ದಾರೆ ಲಿಸ್ಟ್‌ನಲ್ಲಿ?

Published : Jul 01, 2019, 09:38 AM ISTUpdated : Jul 01, 2019, 10:10 AM IST
ರಾಜೀನಾಮೆ ನೀಡಲು ಮುಂದಾದ ಅತೃಪ್ತರು, ಯಾರಿದ್ದಾರೆ ಲಿಸ್ಟ್‌ನಲ್ಲಿ?

ಸಾರಾಂಶ

ಹೊಸಪೇಟೆ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಪತನಕ್ಕೆ ನಾಂದಿ ಹಾಡಿದ್ದಾರೆ. ಆ ಮೂಲಕ ಇನ್ನೂ ಕೆಲವು ಶಾಸಕರು ರಾಜೀನಾಮೆ ನೀಡಲು ತಯಾರಿ ನಡೆಸಿದ್ದಾರೆ. ಯಾರು ಯಾರಿದ್ದಾರೆ ಲಿಸ್ಟ್‌ನಲ್ಲಿ?

ಬೆಂಗಳೂರು (ಜೂ.1):  ಹೊಸಪೇಟೆ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ರಾಜ್ಯದ ಕಾಂಗ್ರೆಸ್-ಜೆಡಿಎಸ್ ಸರಕಾರ ಪತನಕ್ಕೆ ನಾಂದಿ ಹಾಡಿದ್ದಾರೆ. ಆನಂದ್ ಸಿಂಗ್ ಮೂಲಕ ಆರಂಭವಾದ ರಾಜೀನಾಮೆ ಪರ್ವ ಮುಂದುವರಿಯುವ ಲಕ್ಷಣಗಳಿದ್ದು, ಇನ್ನೂ ಒಂಬತ್ತು ಶಾಸಕರು ಶೀಘ್ರವೇ ರಾಜೀನಾಮೆ ನೀಡುವ ಬಗ್ಗೆ ಮಾಹಿತಿ ಇದೆ. 

ಜೂನ್ 30ರ ರಾತ್ರಿ ಅತೃಪ್ತ ಕೆಲವು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ರಹಸ್ಯ ಸಭೆ ನಡೆಸಿದ್ದು, ರಾಜೀನಾಮೆ ನೀಡುವ ಸಂಬಂಧ ಚರ್ಚಿಸಿದ್ದಾರೆ. ಚರ್ಚೆಯಂತೆ ಜು.1ರ ಬೆಳಗ್ಗೆ 7.15ಕ್ಕೆ ಆನಂದ್ ಸಿಂಗ್ ಸ್ಪೀಕರ್ ರಮೇಶ್ ಕುಮಾರ್ ಅವರ ಮನೆಗೇ ತೆರಳಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇವರೊಂದಿಗೆ ಈ ಕೆಳಕಂಡ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆಂದು ಹೇಳಲಾಗುತ್ತಿದೆ....

- ಸಕಲೇಶಪುರ ಶಾಸಕ ಎಚ್.ಕೆ.ಕುಮಾರಸ್ವಾಮಿ (ಜೆಡಿಎಸ್)
- ಹುಣಸೂರಿನ ಎಚ್.ವಿಶ್ವನಾಥ್ (ಜೆಡಿಎಸ್)
- ಕೆ.ಆರ್. ಪೇಟೆಯ ನಾರಾಯಣ ಗೌಡ (ಜೆಡಿಎಸ್)
- ಗೋಕಾಕ್‌ನ ರಮೇಶ್ ಜಾರಕಿಹೊಳಿ (ಕಾಂಗ್ರೆಸ್)
- ಅಥಣಿಯ ಮಹೇಶ್ ಕುಮಟಹಳ್ಳಿ (ಕಾಂಗ್ರೆಸ್)
- ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ (ಕಾಂಗ್ರೆಸ್)
- ಹೀರೆಕೆರೂರು ಶಾಸಕ ಬಿ.ಸಿ.ಪಾಟೀಲ್ (ಕಾಂಗ್ರೆಸ್)

ಇನ್ನೂ ಕೆಲವು ಶಾಸಕರು ರಹಸ್ಯ ಸಭೆಯಲ್ಲಿ ಪಾಲ್ಗೊಂಡಿದ್ದು, ಕೆಲವರು ರಾಜೀನಾಮೆ ನೀಡುವ ಬಗ್ಗೆ ದ್ವಂದ್ವ ನಿಲುವು ತಾಳಿದ್ದಾರೆ ಎಂದು ಹೇಳಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಳೆನರಸೀಪುರದ ಲಕ್ಷ್ಮಿನರಸಿಂಹ ಸ್ವಾಮಿ ರಥೋತ್ಸವ: ರಥದ ಅಲಂಕಾರದಲ್ಲಿ ರಾಜಕೀಯ:ಶ್ರೇಯಸ್ ಪಟೇಲ್ ವಿರುದ್ಧ JDS ಕಾರ್ಯಕರ್ತರ ಆಕ್ರೋಶ
ಇರಾನ್ ದಾಳಿಯ ಸಾವಿನ ದವಡೆಯಿಂದ ಪಾರಾಗಿ ಬೆಂಗಳೂರಿಗೆ ಬಂದಿಳಿದ 230 ಕನ್ನಡಿಗರು; ಬಾಂಬ್ ಬೀಳುವ ಅನುಭವ ಬಿಚ್ಚಿಟ್ಟರು!