
ಬೆಂಗಳೂರು (ಸೆ.24): ಕಾವೇರಿ ವಿಚಾರದಲ್ಲಿ ಕೈಗೊಂಡಿರುವ ನಿರ್ಣಯದ ವಿಚಾರದಲ್ಲಿ ಜೆಡಿಎಸ್ನ ಬಂಡಾಯ ಶಾಸಕರು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಭೇಟಿ ಬಳಿಕ ವರದಿಗಾರರೊಂದಿಗೆ ಮಾತನಾಡಿದ ನಾಗಮಂಗಲ ಶಾಸಕ ಚಲುರಾಯಸ್ವಾಮಿ, ತಮಿಳುನಾಡಿಗೆ ಕಾವೇರಿ ನೀರು ಬಿಡದಿರುವ ಐತಿಹಾಸಿ ತೀರ್ಮಾನ ತೆಗೆದುಕೊಂಡ ಸಿಎಂರನ್ನು ಮಂಡ್ಯ ಭಾಗದ ಜನರ ಪರವಾಗಿ ಅಭಿನಂದನೆ ಸಲ್ಲಿಸಿದ್ದೇನೆ ಎಂದು ಹೇಳಿದರು.
ರೈತರಿಗೆ ಬೆಳೆ ಪರಿಹಾರ ನೀಡುವ ಕುರಿತು ಕಾವೇರಿ ಹಿತ ರಕ್ಷಣಾ ಸಮಿತಿ ಅಧ್ಯಕ್ಷ ಜಿ. ಮಾದೇಗೌರ ಜೊತೆಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ ಬಳಿಕ ರೈತರ ಬೆಳೆ ನಷ್ಟದ ಸಮೀಕ್ಷೆ ನಡೆಸಿ ಪರಿಹಾರ ನೀಡುವ ಕುರಿತು ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ಚೆಲುವರಾಯಸ್ವಾಮಿ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.