ಇದು ಬೆದರಿಕೆ : ತಂತ್ರ ಅತೃಪ್ತರ ಆಕ್ರೋಶ

Published : Jul 26, 2019, 07:45 AM IST
ಇದು ಬೆದರಿಕೆ : ತಂತ್ರ ಅತೃಪ್ತರ ಆಕ್ರೋಶ

ಸಾರಾಂಶ

ಕರ್ನಾಟಕ ರಾಜಕೀಯದಲ್ಲಿ ವಿಪ್ಲವ ಮುಂದುವರಿದಂತಾಗಿದೆ. ಇದೀಗ ಅತೃಪ್ತರು ಮತ್ತೊಮ್ಮೆ ಗರಂ ಆಗಿದ್ದು, ಸ್ಪೀಕರ್ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಸುಪ್ರೀಂ ಮೊರೆ ಹೋಗಿದ್ದಾರೆ. 

ಬೆಂಗಳೂರು [ಜು.26]:  ತಮ್ಮ ವಿರುದ್ಧ ಅನರ್ಹತೆ ಅಸ್ತ್ರ ಬಳಸಿರುವುದು ಸ್ಪೀಕರ್‌ ಮತ್ತು ಕಾಂಗ್ರೆಸ್‌ ಪಕ್ಷದ ಬೆದರಿಕೆ ತಂತ್ರವಾಗಿದೆ ಎಂದು ಆಪಾದಿಸಿರುವ ಮುಂಬೈನಲ್ಲಿರುವ ಅತೃಪ್ತ ಶಾಸಕರು, ಇದರ ವಿರುದ್ಧ ಸುಪ್ರೀಂಕೋರ್ಟ್‌ ಮೊರೆ ಹೋಗಲು ಮುಂದಾಗಿದ್ದಾರೆ. ಇಂಥ ಕ್ರಮಗಳ ಮೂಲಕ ನಮ್ಮನ್ನು ಬೆದರಿಸುವ ಪ್ರಯತ್ನ ಯಶಸ್ಸು ಕಾಣುವುದಿಲ್ಲ ಎಂದೂ ಅವರು ಹೇಳಿದ್ದಾರೆ.

ಇಂಥ ಪ್ರಯತ್ನಗಳು ನಡೆಯಬಹುದು ಎಂಬ ನಿರೀಕ್ಷೆಯಿತ್ತು. ನಾವು ಸ್ಪೀಕರ್‌ ನೀಡಿರುವ ಈ ಅನರ್ಹತೆಯ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ ಮೊರೆ ಹೋಗಲು ನಿರ್ಧರಿಸಿದ್ದೇವೆ ಎಂದು ಅತೃಪ್ತ ಶಾಸಕರ ಆಪ್ತರು ಮಾಹಿತಿ ನೀಡಿದ್ದಾರೆ.

ಈಗ ಮೂವರ ವಿರುದ್ಧ ಅನರ್ಹತೆ ಅಸ್ತ್ರ ಬಳಸಿರುವುದರಿಂದ ಇನ್ನುಳಿದ ಶಾಸಕರು ಆತಂಕಕ್ಕೊಳಗಾಗಿ ವಾಪಸ್‌ ಬರಬಹುದು ಎಂಬ ನಿರೀಕ್ಷೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷದ ನಾಯಕರಿಗೆ ಇರಬಹುದು. ಆದರೆ, ವಾಪಸ್‌ ಬರುವುದಿಲ್ಲ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India News Live: IPL 2026 - ಪಂಜಾಬ್ ಕಿಂಗ್ಸ್ ಗೆಲ್ಲುತ್ತಿದ್ದಂತೆಯೇ ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದ ಮತ್ತೊಂದು ತಂಡ!
Karnataka News Live: ಮುಳ್ಳಯ್ಯನಗಿರಿಯಲ್ಲಿ ಸೃಷ್ಟಿಯಾಯ್ತು ‘ಮಿನಿ ಹಿಮಾಲಯ’ - ಮುಂಗಾರಿಗೂ ಮುನ್ನವೇ ಮಂಜಿನ ನಗರಿಯಾದ ಕಾಫಿನಾಡು!