
ಚೆನ್ನೈ(ಡಿ.21):ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ನಿಧನದಿಂದ ತೆರವಾಗಿದ್ದ ಆರ್.ಕೆ. ನಗರ ವಿಧಾನಸಭಾ ಕ್ಷೇತ್ರದ ಮರು ಚುನಾವಣೆಯಲ್ಲಿ ಶೇ.77 ದಾಖಲೆ ಮತದಾನವಾಗಿದೆ.
2011ರಲ್ಲಿ ಹೊರತುಪಡಿಸಿದರೆ ಈ ಅವಧಿಯಲ್ಲಿಯೇ ಅತೀ ಹೆಚ್ಚು ಮತದಾನವಾಗಿದೆ. 2016ರಲ್ಲಿ ಶೇ.67.6 ಮತದಾನವಾಗಿತ್ತು. ಚುನಾವಣಾ ಕಣದಲ್ಲಿ ಎಐಎಡಿಎಂಕೆ ಪಳಿನಿಸ್ವಾಮಿ ಬಣದಿಂದ ಇ. ಮಧುಸೂದನ್, ಶಶಿಕಲಾ ಬಣದಿಂದ ಟಿಟಿವಿ ದಿನಕರನ್ ಹಾಗೂ ಡಿಎಂಕೆಯಿಂದ ಎಂ. ಗಣೇಶ್ ಸ್ಪರ್ಧಿಸಿದ್ದಾರೆ.
ಕ್ಷೇತ್ರದಲ್ಲಿ ತಮಿಳು ಸಮುದಾಯದವರಿಗಿಂತ ತೆಲುಗು ಭಾಷಿಕರು ನಿರ್ಣಾಯಕವಾಗಿದ್ದಾರೆ. ಮತ ಎಣಿಕೆ ಡಿ.24 ರಂದು ನಡೆಯಲಿದ್ದು, ಅಂದು ಮಧ್ಯಾಹ್ನವೇ ಫಲಿತಾಂಶ ನಿರ್ಧಾರವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.