ಕಾಶ್ಮೀರದಲ್ಲಿ ಜನಮತಗಣನೆ ನಡೆಯಲಿ: ಪಾಕ್‌ ಅಧ್ಯಕ್ಷ

Published : Mar 24, 2018, 07:07 PM ISTUpdated : Apr 11, 2018, 01:13 PM IST
ಕಾಶ್ಮೀರದಲ್ಲಿ ಜನಮತಗಣನೆ ನಡೆಯಲಿ: ಪಾಕ್‌ ಅಧ್ಯಕ್ಷ

ಸಾರಾಂಶ

ಭಾರತ ಗಡಿಯಲ್ಲಿ ಕದನವಿರಾಮವನ್ನು ಉಲ್ಲಂಘಿಸುತ್ತಿದೆ ಮತ್ತು ಮಾನವ ಹಕ್ಕುಗಳ ದೌರ್ಜನ್ಯವೆಸಗುತ್ತಿದೆ ಎಂದು ಪಾಕಿಸ್ತಾನ ಅಧ್ಯಕ್ಷ ಮಮ್ನೂನ್‌ ಹುಸೇನ್‌ ಶುಕ್ರವಾರ ಆರೋಪಿಸಿದ್ದಾರೆ. ಭಾರತದ ಕೃತ್ಯದಿಂದಾಗಿ ಪ್ರದೇಶಿಕ ಶಾಂತಿಗೆ ಧಕ್ಕೆ ಉಂಟಾಗಿದೆ ಎಂದೂ ಅವರು ಹೇಳಿದ್ದಾರೆ.

ಇಸ್ಲಾಮಾಬಾದ್‌: ಭಾರತ ಗಡಿಯಲ್ಲಿ ಕದನವಿರಾಮವನ್ನು ಉಲ್ಲಂಘಿಸುತ್ತಿದೆ ಮತ್ತು ಮಾನವ ಹಕ್ಕುಗಳ ದೌರ್ಜನ್ಯವೆಸಗುತ್ತಿದೆ ಎಂದು ಪಾಕಿಸ್ತಾನ ಅಧ್ಯಕ್ಷ ಮಮ್ನೂನ್‌ ಹುಸೇನ್‌ ಶುಕ್ರವಾರ ಆರೋಪಿಸಿದ್ದಾರೆ. ಭಾರತದ ಕೃತ್ಯದಿಂದಾಗಿ ಪ್ರದೇಶಿಕ ಶಾಂತಿಗೆ ಧಕ್ಕೆ ಉಂಟಾಗಿದೆ ಎಂದೂ ಅವರು ಹೇಳಿದ್ದಾರೆ.

‘ಪಾಕಿಸ್ತಾನ ದಿನ’ದಂದು ಜಂಟಿ ಮಿಲಿಟರಿ ಪರೇಡ್‌ ವೀಕ್ಷಿಸಿ ಮಾತನಾಡಿದ ಮಮ್ನೂನ್‌, ಕಾಶ್ಮೀರದ ವಿಷಯವನ್ನೂ ಪ್ರಸ್ತಾಪಿಸಿದ್ದಾರೆ. ಕಾಶ್ಮೀರ ವಿವಾದಕ್ಕೆ ಇರುವ ಏಕೈಕ ಪರಿಹಾರವೆಂದರೆ ಕಾಶ್ಮೀರದ ಜನರಿಗೆ ಸ್ವಯಂ ನಿರ್ಧಾರ ಕೈಗೊಳ್ಳುವ ಅಧಿಕಾರ ನೀಡಬೇಕು. ಕಾಶ್ಮೀರದಲ್ಲಿ ಜನಮತಗಣನೆ ನಡೆಸುವ ನಿಟ್ಟಿನಲ್ಲಿ ಪಾಕಿಸ್ತಾನ ತನ್ನ ಹಸ್ತಕ್ಷೇಪವನ್ನು ಮುಂದುವರಿಸಲಿದೆ ಎಂದು ಮಮ್ನೂನ್‌ ಹುಸೇನ್‌ ಹೇಳಿದ್ದಾರೆ.

ಪಾಕಿಸ್ತಾನ ದಿನನ ಸಮಾರಂಭದಲ್ಲಿ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಭಾರತದ ಉಪ ಹೈಕಮಿಷನರ್‌ ಜೆ.ಪಿ. ಸಿಂಗ್‌ ಕೂಡ ಕಾರ್ಯಕ್ರಮಕ್ಕೆ ತೆರಳಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೌದು ನಾನು ಟಿ ಮಾರಾಟಗಾರ, ಕಾಂಗ್ರೆಸ್ AI ವಿಡಿಯೋಗೆ ಸೂಕ್ತ ಸ್ಥಳದಲ್ಲಿ ತಿರುಗೇಟು ಕೊಟ್ಟ ಮೋದಿ
ದುರ್ಗೆಯ ಜಾಗೋ ಮಾ ಸಾಕು ಜಾತ್ಯಾತೀತ ಗೀತೆ ಹಾಡಿ: ಪಶ್ಚಿಮ ಬಂಗಾಳದಲ್ಲಿ ಗಾಯಕಿಗೆ ಕಿರುಕುಳ: ಬಂಧನ