#ReleaseKannadaActivists ಸೋಶಿಯಲ್ ಮೀಡಿಯಾದಲ್ಲಿ ಕನ್ನಡ ಧ್ವನಿ

Published : Aug 19, 2019, 07:09 PM ISTUpdated : Aug 19, 2019, 07:23 PM IST
#ReleaseKannadaActivists ಸೋಶಿಯಲ್ ಮೀಡಿಯಾದಲ್ಲಿ ಕನ್ನಡ ಧ್ವನಿ

ಸಾರಾಂಶ

ಸೋಶಿಯಲ್ ಮೀಡಿಯಾದಲ್ಲಿ #ReleaseKannadaActivists ಹ್ಯಾಷ್ ಟ್ಯಾಗ್ ಟ್ರೆಂಡ್ ಆಗುತ್ತಿದೆ. ಇದಕ್ಕೆ ಕಾರಣ ಕನ್ನಡ ಹೋರಾಟಗಾರರ ಬಂಧನ.

ಬೆಂಗಳೂರು[ಆ. 19]  ಪ್ರಭಾವಿ ಸೋಶಿಯಲ್ ಮೀಡಿಯಾ ಎಂದು ಕರೆಸಿಕೊಂಡಿರುವ್ ಟ್ವಿಟರ್ ನಲ್ಲಿ #ReleaseKannadaActivists ಟ್ರೆಂಡ್ ಆಗುತ್ತಿದೆ. ಬಂಧನ ಮಾಡಿರುವ ಕನ್ನಡ ಹೋರಾಟಗಾರರನ್ನು ಬಿಡುಗಡೆ ಮಾಡಬೇಕು ಮಾಜಿ ಸಿಎಂ ಸಿದ್ದರಾಮಯ್ಯ,ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ ಆದಿಯಾಗಿ ಅನೇಕರು ಆಗ್ರಹಿಸಿದ್ದಾರೆ.

ಹಿಂದಿ ಬ್ಯಾನರ್ ಹರಿದ ಕಾರಣಕ್ಕಾಗಿ ಕನ್ನಡ ಹೋರಾಟಗಾರರ ಬಂಧನ ಮಾಡಲಾಗಿದ್ದು ಅವರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆಗಳಿಗೂ ವೇದಿಕೆ ಸಿದ್ಧವಾಗಿದೆ. ಕರ್ನಾಟಕ ರಣಧೀರ ಪಡೆಯ ಅಧ್ಯಕ್ಷ ಹರೀಶ್ ಕುಮಾರ್ ಅವರನ್ನು  ಬಿಡುಗಡೆ ಮಾಡಬೇಕು ಎಂಬ ಒತ್ತಾಯ ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿದೆ. ಬೆಂಗಳೂರಿನ ಪುರಭವನದ ಮುಂದೆ ಕನ್ನಡ ಹೋರಾಟಗಾರರು ಪ್ರತಿಭಟನೆ ಸಹ ನಡೆಸಿ ಘೊಷಣೆ ಕೂಗಿದ್ದಾರೆ.

ಹಿಂದಿ ಬ್ಯಾನರ್ ಹರಿದ ವಿಚಾರ ಕುರಿತಂತೆ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು. ಇದಾದ ಮೇಲೆ ಸಾಮಾಜಿಕ ತಾಣದಲ್ಲಿ ವ್ಯಾಪಕ ಚರ್ಚೆ ಶುರುವಾಯಿತು. ತೇಜಸ್ವಿ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿರುವ ಹೋರಾಟಗಾರರು ಹಿಂದಿ ಹೇರಿಕೆ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?