
ಮುಂಬೈ: ಉಗ್ರರ ಅಟ್ಟಹಾಸಕ್ಕೆ ಹುತಾತ್ಮರಾಗಿರುವ CRPFನ 44 ಯೋಧರ ಕುಟುಂಬಕ್ಕೆ ಎಲ್ಲಾ ರೀತಿಯ ನೆರವನ್ನು ನೀಡಲು ಸಿದ್ಧವೆಂದು ರಿಲಯನ್ಸ್ ಫೌಂಡೇಶನ್ ಹೇಳಿದೆ.
ಉಗ್ರರ ಹೇಯ ಕೃತ್ಯವನ್ನು ಕಟುವಾದ ಶಬ್ಧಗಳಿಂದ ಖಂಡಿಸಿರುವ ರಿಲಯನ್ಸ್ ಫೌಂಡೇಶನ್, ಹುತಾತ್ಮ ಯೋಧರ ಮಕ್ಕಳ ಶಿಕ್ಷಣ ಮತ್ತು ನೌಕರಿಯ ಜವಾಬ್ದಾರಿಯನ್ನು ತಾವು ಹೊರಲು ತಯಾರಾಗಿದ್ದೇವೆ ಎಂದು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದೆ.
ಕನ್ನಡಪ್ರಭ ಸುದ್ದಿಗಳನ್ನು ಇಲ್ಲಿ ಓದಿ: http://kpepaper.asianetnews.com/
ಉಗ್ರರ ದಾಳಿಯಲ್ಲಿ ಗಾಯಗೊಂಡಿರುವ ಯೋಧರಿಗೆ ರಿಲಯನ್ಸ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಲು ನಾವು ಸಿದ್ಧವೆಂದು ಫೌಂಡೇಶನ್ ಈ ಸಂದರ್ಭದಲ್ಲಿ ಹೇಳಿದೆ.
ಸೇನೆಯ ಸೇವೆಗಾಗಿ ಸರ್ಕಾರ ವಹಿಸುವ ಯಾವುದೇ ಜವಾಬ್ದಾರಿಯನ್ನು ನಾವು ನಮ್ಮ ಕರ್ತವ್ಯವೆಂದು ಭಾವಿಸಿ, ಅದನ್ನು ನಿರ್ವಹಿಸಲು ಸದಾ ಸಿದ್ಧ
-ರಿಲಯನ್ಸ್ ಫೌಂಡೇಶನ್
ಇದನ್ನೂ ಓದಿ: ಯಾವುದೇ ದಾಖಲೆ ಕೇಳದೆ ಹುತಾತ್ಮ ಯೋಧನ ಹಣ ನೀಡಿದ LIC
ನೀತಾ ಅಂಬಾನಿ ನೇತೃತ್ವದ ರಿಲಯನ್ಸ್ ಫೌಂಡೇಶನ್, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಂಗಸಂಸ್ಥೆಯಾಗಿದ್ದು, ಶಿಕ್ಷಣ, ಗ್ರಾಮೀಣಾಭಿವೃದ್ಧಿ, ಆರೋಗ್ಯ ಮುಂತಾದ ಹತ್ತು ಹಲವಾರು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದೆ.
ಕಳೆದ ಗುರುವಾರ (ಫೆ.14)ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಲ್ಲಿ 44 ಮಂದಿ CRPF ಯೋಧರು ಹುತಾತ್ಮರಾಗಿದ್ದು, 70 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ