
ಬೆಂಗಳೂರು (ಜೂ. 05): 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕರಿಗೆ ನೀವೇ ನಿಲ್ಲಿ, ಗೆಲ್ಲಲು ಸುಲಭ ಎಂಬ ಒತ್ತಡ ಇರುವುದಿಲ್ಲವಂತೆ. ಸರ್ಕಾರ ಸಂಖ್ಯೆಯ ವಿಷಯದಲ್ಲಿ ನಾಜೂಕಾಗಿ ಇರುವುದರಿಂದ ಯಾವುದೇ ಶಾಸಕರಿಗೆ ಲೋಕಸಭಾ ಟಿಕೆಟ್ ಕೊಡುವ ಪ್ರಶ್ನೆ ಇಲ್ಲ ಎಂದು ಹೈಕಮಾಂಡ್ ರಾಜ್ಯ ನಾಯಕರಿಗೆ ಹೇಳಿದೆ.
ಹೀಗಾಗಿ ದೇಶಪಾಂಡೆ, ಎಚ್ ಕೆ ಪಾಟೀಲ್, ರೋಷನ್ ಬೇಗ್, ಜಾರಕಿಹೊಳಿ ನಿರಾಳರಾಗಿದ್ದಾರೆ. ಈ ಬಾರಿ ಬಲಾಢ್ಯರು ಸೋತಿರುವುದರಿಂದ ಲೋಕಸಭಾ ಚುನಾವಣೆಗೆ ನಿಲ್ಲಲು ಕಾಂಗ್ರೆಸ್ನಲ್ಲಿ ಪೈಪೋಟಿ ಇರೋದು ನಿಶ್ಚಿತ. ರಮಾನಾಥ್ ರೈ, ಭೀಮಣ್ಣ ನಾಯಕ, ವಿನಯ ಕುಲಕರ್ಣಿ, ಕಾಶಪ್ಪನವರ, ರಾಜು ಅಲಗೂರು, ಆಂಜನೇಯ, ಎಸ್ ಎಸ್ ಮಲ್ಲಿಕಾರ್ಜುನ್ಗೆ ಈಗಿನಿಂದಲೇ ತಯಾರಿ ಮಾಡಿಕೊಳ್ಳಲು ಹೇಳಲಾಗುತ್ತಿದೆ.
-ಪ್ರಶಾಂತ್ ನಾತು, ಸುವರ್ಣ ನ್ಯೂಸ್ ದೆಹಲಿ ಪ್ರತಿನಿಧಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.