ಭಾರತದಲ್ಲಿ ದಲಿತರ ಮೇಲಿನ ದೌರ್ಜನ್ಯದ ಬಗ್ಗೆ ಅಮೆರಿಕಾದಲ್ಲಿ ಚರ್ಚೆ

Published : Feb 10, 2017, 10:00 AM ISTUpdated : Apr 11, 2018, 12:35 PM IST
ಭಾರತದಲ್ಲಿ ದಲಿತರ ಮೇಲಿನ ದೌರ್ಜನ್ಯದ ಬಗ್ಗೆ ಅಮೆರಿಕಾದಲ್ಲಿ ಚರ್ಚೆ

ಸಾರಾಂಶ

ವಾಷಿಂಗ್ಟನ್‌ (ಫೆ.10):  ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹಾಗೂ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಕುರಿತು ಅಮೆರಿಕಾದಲ್ಲಿ ಚರ್ಚೆ ಮುಂದುವರೆದಿದೆ.

ವಾಷಿಂಗ್ಟನ್‌ (ಫೆ.10):  ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹಾಗೂ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಕುರಿತು ಅಮೆರಿಕಾದಲ್ಲಿ ಚರ್ಚೆ ಮುಂದುವರೆದಿದೆ.

ಅಮೆರಿಕಾದ ಅಂತರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಅಯೋಗವು ವರದಿ ಬಿಡುಗಡೆ ಮಾಡಿದ್ದು, ಭಾರತದೊಂದಿಗೆ ನಡೆಯುವ ವಾಣಿಜ್ಯ ಹಾಗೂ ರಾಜತಾಂತ್ರಿಕ ದ್ವಿಪಕ್ಷೀಯ ಮಾತುಕತೆಗಳಲ್ಲಿ ದಲಿತರ ಮೇಲಿನ ದೌರ್ಜನ್ಯ ಹಾಗೂ ಧಾರ್ಮಿಕ ಅಲ್ಪಸಂಖ್ಯಾತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆಯಾಗಬೇಕೆಂದು ಅಗ್ರಹಿಸಿದೆ.

ಪರಿಣಾಮಕಾರಿ ಅಪರಾಧ ದಂಡಸಂಹಿತೆ ಜಾರಿಯಲ್ಲಿಲ್ಲದ ಕಾರಣ ಭಾರತದಲ್ಲಿ ದಲಿತರು ಹಾಗೂ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯಗಳು ನಡೆಯುತ್ತಾ ಬಂದಿವೆ: 2014 ರಿಂದ ದೌರ್ಜನ್ಯ ಪ್ರಕರಣಗಳಲ್ಲಿ ಭಾರೀ ಏರಿಕೆಯಾಗಿದೆಯೆಂದು ವರದಿ ಹೇಳಿದೆ.

ಭಾರತವು ಬಹುತ್ವ ಹಿಂದಿದ ಹಾಗೂ ಪ್ರಜಾತಾಂತ್ರಿಕ ದೇಶವಾಗಿದ್ದು ಅಲ್ಲಿನ ಸಂವಿಧಾನವು ಜಾತಿ ಹಾಗೂ ಧರ್ಮಾಧರಿತ ಪಕ್ಷಪಾತವನ್ನು ನಿರುತ್ತೇಜಿಸುತ್ತದೆ, ಎಂದು USCIRF ಅಧ್ಯಕ್ಷ ಥಾಮಸ್ ಜೆ ರೀಸ್ ಹೇಳಿದ್ದಾರೆ.

ಕಳೆದ ಕೆಲ ವರ್ಷ ಗಳಲ್ಲಿ ಅಸಹನೆ ಹೆಚ್ಚಿದ್ದು ಧಾರ್ಮಿಕ ಹಕ್ಕುಗಳ ಉಲ್ಲಂಘನೆ ಹೆಚ್ಚಾಗಿದೆ. ಸಾವಿಂಧಾನಿಕ ಬದ್ದತೆ ಹಾಗೂ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಮಾನದಂಡ ಗಳನುಸಾರ ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆಯೆಂದು ರೀಸ್ ಹೇಳಿದ್ದಾರೆ.

ಭಾರತದ ಕೆಲ ರಾಜ್ಯಗಳಲ್ಲಿರುವ ಮತಾಂತರ ವಿರೋಧಿ ಕಾನೂನುಗಳು ಅಂತರಾಷ್ಟ್ರೀಯ ನಿಯಮಗಳಿಗೆ ವಿರುದ್ಧವಾಗಿದ್ದು ಅವುಗಳನ್ನು ವಾಪಸು ಪಡೆಯುವಂತೆ ವರದಿಯು ಅಗ್ರಹಿಸಿದೆ.

ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಶ್ರಮಿಸುವ ಸರ್ಕಾರೇತರ ಸಂಸ್ಥೆಗಳ ಮೇಲೆ ಸರ್ಕಾರವು ಹೇರಿರುವ ನಿರ್ಬಂಧವನ್ನು ಹಿಂಪಡೆಯಬೇಕೆಂದು ಅಯೋಗವು ಅಗ್ರಹಿಸಿದೆಯಲ್ಲದೇ, ಭಾರತದಲ್ಲಿ ದ್ವೇಷ ಹರಡಲು ಅಮೆರಿಕಾದಲ್ಲಿದ್ದು ಹಣಸಂಗ್ರಹ ಮಾಡುವ ಹಿಂದುತ್ವ ಗುಂಪುಗಳನ್ನು ನಿಷೇಧಿಸಬೇಕೆಂದು ಅದು ಶಿಫಾರಸ್ಸು ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್
ಚಾಲನೆಯಲ್ಲಿದ್ದಾಗಲೇ ಪ್ರಜ್ಞೆ ಕಳೆದುಕೊಂಡ ಚಾಲಕ: ವಿಮಾನ ಟೇಕಾಫ್‌ದಂತೆ ಮೇಲೇರಿದ ಮರ್ಸಿಡಿಸ್: ವೀಡಿಯೋ