
ಮುಂಬೈ (ಅ.26): ಟಾಟಾ ಸನ್ಸ್ ಸಮೂಹ ಸಂಸ್ಥೆಯಿಂದ ಪದಚ್ಯುತಗೊಂಡಿರುವ ಸೈರಸ್ ಮಿಸ್ತ್ರಿ ಈ ಮೇಲ್ ಮೂಲಕ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ಟಾಟಾ ಮಂಡಳಿಯ ಸದಸ್ಯರಿಗೆ ಮಿಸ್ತ್ರಿ ಈ ಮೇಲ್ ಮಾಡಿದ್ದು, “ನನ್ನನ್ನು ಏಕಾಏಕಿ ಅಧ್ಯಕ್ಚ ಸ್ಥಾನದಿಂದ ವಜಾಗೊಳಿಸಿರುವುದು ಆಘಾತವಾಗಿದೆ. ನನ್ನನ್ನು ಸಮರ್ಥನೆ ಮಾಡಿಕೊಳ್ಳುವ ಒಂದು ಅವಕಾಶವನ್ನು ನನಗೆ ನೀಡಿಲ್ಲ" ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಪದಚ್ಯುತ ಮಿಸ್ತ್ರಿ ವಿರುದ್ಧ ಯಾವುದೇ ಆದೇಶ ಹೊರಡಿಸುವ ಮುನ್ನ ತಮ್ಮ ವಾದವನ್ನು ಆಲಿಸಬೇಕು ಎಂದು ಕೋರ್ಟ್ ಗಳಿಗೆ ಟಾಟಾ ಸನ್ಸ್ ಮತ್ತು ಟಾಟಾ ಟ್ರಸ್ಟ್ ಕೇವಿಯಟ್ ಗಳನ್ನು ಸಲ್ಲಿಸಿದೆ. ರತನ್ ಟಾಟಾ ಕೂಡಾ ಮಿಸ್ತ್ರಿ ವಿರುದ್ಧ ಅರ್ಜಿ ಸಲ್ಲಿಸಿದ್ದಾರೆ. ಆದರೆ ಸೈರಸ್ ಯಾವುದೇ ಕೇವಿಯಟ್ ಸಲ್ಲಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.