ಕೊಡಗು ಸಂತ್ರಸ್ತರಿಗೆ ಬಾಡಿಗೆ ಮನೆ

Published : Sep 02, 2018, 10:57 AM ISTUpdated : Sep 09, 2018, 09:38 PM IST
ಕೊಡಗು ಸಂತ್ರಸ್ತರಿಗೆ ಬಾಡಿಗೆ ಮನೆ

ಸಾರಾಂಶ

ಕೊಡಗು ನೆರೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಈಗಾಗಲೇ  ಎಕರೆ ಜಮೀನು ಗುರುತಿಸಿದ್ದು, ಈ ಪೈಕಿ 24 ಎಕರೆ ಭೂಮಿಗೆ ಸಂಬಂಧಿಸಿದ ದಾಖಲೆಗಳ ಸಂಗ್ರಹವಾಗಿದೆ. ಮನೆ ನಿರ್ಮಿಸುವವರೆಗೂ ಸಂತ್ರಸ್ತರಿಗೆ ತಾತ್ಕಾಲಿಕ ಪುನರ್ವಸತಿ ಕಲ್ಪಿಸಬೇಕು. ಆದ್ದರಿಂದ ಬಾಡಿಗೆ ಮನೆಯಲ್ಲಿ ವಾಸಿಸಲು ನಿರ್ಧಿಷ್ಟ ಹಣ ನೀಡಲು ಚಿಂತನೆ ನಡೆದಿದೆ ಎಂದು ಸಚಿವ ಯು.ಟಿ ಖಾದರ್ ಹೇಳಿದ್ದಾರೆ. 

ಬೆಂಗಳೂರು: ಕೊಡಗು ನೆರೆ ಸಂತ್ರಸ್ತರಿಗೆ ಶಾಶ್ವತ ಪುನರ್ ವಸತಿ ಕಲ್ಪಿಸುವವರೆಗೆ ತಾತ್ಕಾಲಿಕ ಶೆಡ್ ನಿರ್ಮಿಸುವ ಬದಲು ಬಾಡಿಗೆ ಮನೆಯಲ್ಲಿ ಇರುವಂತೆ ಮಾಡಿ ನಿರ್ದಿಷ್ಟ ಹಣವನ್ನು ಸರ್ಕಾರ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ವಸತಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. 

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೊಡಗು ನೆರೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಈಗಾಗಲೇ  ಎಕರೆ ಜಮೀನು ಗುರುತಿಸಿದ್ದು, ಈ ಪೈಕಿ 24 ಎಕರೆ ಭೂಮಿಗೆ ಸಂಬಂಧಿಸಿದ ದಾಖಲೆಗಳ ಸಂಗ್ರಹವಾಗಿದೆ. ಮನೆ ನಿರ್ಮಿಸುವವರೆಗೂ ಸಂತ್ರಸ್ತರಿಗೆ ತಾತ್ಕಾಲಿಕ ಪುನರ್ವಸತಿ ಕಲ್ಪಿಸಬೇಕು. 

ತಾತ್ಕಾಲಿಕ ಶೆಡ್ ನಿರ್ಮಿಸಿದರೆ  ಸಮಸ್ಯೆಗಳೇ ಹೆಚ್ಚು. ಮನೆ ನಿರ್ಮಿಸುವವರೆಗೂ ಸಂತ್ರಸ್ತರು ಸಂಬಂಧಿಕರ ಅಥವಾ ಬಾಡಿಗೆ ಮನೆಯಲ್ಲಿ ಇರಬಹುದು. ಈ ವೇಳೆ ಅವರಿಗೆ ಸರ್ಕಾರದಿಂದ ಗರಿಷ್ಠ ಒಂದು ವರ್ಷದವರೆಗೆ ಇಂತಿಷ್ಟು ಹಣ ನೀಡಬಹುದು. ಈ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೊಡಗು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ.  ಮುಖ್ಯಮಂತ್ರಿಗಳ ಗಮನಕ್ಕೂ ತಂದಿದ್ದೇನೆ. ಅವರು ಕೈಗೊಳ್ಳುವ ನಿರ್ಧಾರ ಆಧರಿಸಿ ಮುಂದುವರಿಯುವುದಾಗಿ ಹೇಳಿದರು. 

25 ಲಕ್ಷ ರು.ದೇಣಿಗೆ: ವಸತಿ ಇಲಾಖೆಯಿಂದ ಕೊಡಗು ನೆರೆ ಸಂತ್ರಸ್ತರ ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ರು. ದೇಣಿಗೆ ನೀಡಲು ನಿರ್ಧರಿಸಲಾಗಿದೆ. ಇತ್ತೀಚೆಗೆ ರಾಜೀವ್ ಗ್ರಾಮೀಣ ವಸತಿ ನಿಗಮಕ್ಕೆ ಐದು ಲಕ್ಷ ರು. ನಗದು ಸೇರಿದಂತೆ ಇ-ಆಡಳಿತ ಪ್ರಶಸ್ತಿ ಬಂದಿದೆ. ಈ ಮೊತ್ತಕ್ಕೆ 20 ಲಕ್ಷ ಸೇರಿಸಿ  ಒಟ್ಟು 25 ಲಕ್ಷ ರು.ಗಳನ್ನು ಕೊಡಗು ನೆರೆ ಸಂತ್ರಸ್ತರ ಸಿಎಂ ಪರಿಹಾರ ನಿಧಿಗೆ ನೀಡಲಾಗುವುದು ಎಂದರು. ಕೆಎಚ್‌ಬಿ ಮನೆ ದುಬಾರಿ ಎಂಬ ಧೂರಿಗೆ ಪ್ರತಿಕ್ರಿಯಿಸಿದ ಸಚಿವರು, ನಷ್ಟ ಮಾಡಿಕೊಂಡು ಮನೆಗಳನ್ನು ಮಾರಾಟ ಮಾಡಲೂ ಸಾಧ್ಯವಿಲ್ಲ. ದೂರುಗಳ ಬಗ್ಗೆ ಸಹಾಯವಾಣಿ ಆರಂಭಿಸಲು ಉದ್ದೇಶಿಸಲಾಗಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಟ್ರಂಪ್ ಮಾತ್ರವಲ್ಲ, ಕ್ಲಿಂಟನ್, ಬಿಲ್ ಗೇಟ್ಸ್ ಕೂಡ..' ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಫೋಟೋಗಳು ರಿಲೀಸ್
ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!