
ನವದೆಹಲಿ (ಡಿ.21): ನೋಟು ಅಮಾನ್ಯ ಕ್ರಮದ ಬಳಿಕ, ಬ್ಯಾಂಕಿಂಗ್ ನಿಯಮಗಳನ್ನು ಸತತವಾಗಿ ಬದಲಾಯಿಸುತ್ತಿರುವ ಭಾರತೀಯ ರಿಸರ್ವ್ ಬ್ಯಾಂಕ್ ಕ್ರಮವನ್ನು ವಿಪಕ್ಷಗಳು ಕಟುವಾಗಿ ಟೀಕಿಸಿವೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಈಗ ರಿವರ್ಸ್ ಬ್ಯಾಂಕ್ ಆಫ್ ಇಂಡಿಯಾ ಆಗಿ ಮಾರ್ಪಟ್ಟಿದೆ. ಕಳೆದ 43 ದಿನಗಳಲ್ಲಿ 126 ಬಾರಿ ನಿಯಮಗಳನ್ನು ಬದಲಾಯಿಸಲಾಗಿದೆ, ಎಂದು ಕಾಂಗ್ರೆಸ್ ಮುಖಂಡ ರಣದೀಪ್ ಸಿಂಗ್ ಸುರ್ಜೆವಾಲ ಹೇಳಿದ್ದಾರೆ.
ರೂ.5000 ಕ್ಕಿಂತ ಹೆಚ್ಚಿನ ನಗದನ್ನು ಬ್ಯಾಂಕುಗಳಲ್ಲಿ ಡಿಪಾಸಿಟ್ ಮಾಡುವುದಕ್ಕೆ ನಿರ್ಬಂಧವನ್ನು ಹೇರಿದ್ದ ರಿಸರ್ವ್ ಬ್ಯಾಂಕ್, ಇಂದು ಅದನ್ನು ಸಡಿಲಿಸಿದೆ.
ನ.8ರಂದು ನೋಟು ಅಮಾನ್ಯ ಕ್ರಮವನ್ನು ಘೋಷಿಸುವಾಗ, ಪ್ರಧಾನಿ ಮೋದಿ ಡಿ.31ರವರೆಗೆ ಹಳೆ ನೋಟುಗಳನ್ನು ಬ್ಯಾಂಕುಗಳಲ್ಲಿ ಜಮಾವಣೆ ಮಾಡಲು ಯಾವುದೇ ನಿರ್ಬಂಧವಿರುವುದಿಲ್ಲವೆಂದಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.