ಅಣ್ಣಾಮಲೈಗೆ 10 ಸಾವಿರ ಮೀರಿದ ಕರೆಗಳು, ಸಾವಿರಾರು ಸಂದೇಶ

Published : May 29, 2019, 01:47 PM IST
ಅಣ್ಣಾಮಲೈಗೆ 10 ಸಾವಿರ ಮೀರಿದ ಕರೆಗಳು, ಸಾವಿರಾರು ಸಂದೇಶ

ಸಾರಾಂಶ

ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ತಮ್ಮ ಹುದ್ದೆ ರಾಜೀನಾಮೆ ನೀಡಿದ್ದು, ಅಭಿಮಾನಿಗಳಿಂದ ಸಾವಿರಾರು ಕರೆಗಳು ಬರುತ್ತಿದ್ದು, ಅವರ ಭೇಟಿಗೆ ಆಗ್ರಹಿಸುತ್ತಿದ್ದಾರೆ. 

ಬೆಂಗಳೂರು :  ಕರ್ನಾಟಕದ ‘ಸಿಂಗಂ’ ಎಂದೇ ಹೆಸರು ಮಾಡಿರುವ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಅವರು ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. 

ಬೆಂಗಳೂರಿನಲ್ಲಿ ದಕ್ಷಿಣ ವಿಭಾಗದ ಡಿಸಿಪಿಯಾಗಿದ್ದ ಅಣ್ಣಾಮಲೈ ಕುಪ್ಪೆಸ್ವಾಮಿ ಅವರ ರಾಜೀನಾಮೆಯಿಂದ ಅವರ ಅಭಿಮಾನಿ ಬಳಗಕ್ಕೆ ಹೆಚ್ಚು ಸಂಕಟವಾಗಿದ್ದು, ಈ ನಿಟ್ಟಿನಲ್ಲಿ ವರ ಅಭಿಮಾನಿಗಳಿಂದ ಸಾವಿರಾರು ಕರೆಗಳು ಬರುತ್ತಿವೆ. 

ಮಂಗಳವಾರ ಹುದ್ದೆ ತೊರೆದಿದ್ದು, ಅವರು ಕಾರ್ಯನಿರ್ವಹಿಸಿದ   ಬೆಂಗಳೂರು , ಚಿಕ್ಕಮಂಗಳೂರು ಕಾರ್ಕಳ, ಉಡುಪಿ ಸೇರಿದಂತೆ ರಾಜ್ಯದ ವಿವಿಧ ಮೂಲೆಗಳಿಂದ ಸಾವಿರಾರು ಕರೆಗಳು ಬರುತ್ತಿವೆ. 

ಅಷ್ಟು ಮಾತ್ರವಲ್ಲದೇ ದಕ್ಷಿಣ ವಿಭಾಗದ ಡಿಸಿಪಿ ಕಚೇರಿಗೆ ಕರೆ ಮಾಡಿ ಸಾಹೇಬರು ಇದ್ದಾರ ಎಂದು ಅಭಿಮಾನಿಗಳು ವಿಚಾರಿಸುತ್ತಿದ್ದು, ಭೇಟಿಗೆ ಆಗ್ರಹಿಸುತ್ತಿದ್ದಾರೆ.  

ಅಲ್ಲದೇ ಅವರ ಬಳಿ ಮಾತುಕತೆ ನಡೆಸಬೇಕು ಎಂದು ಕೇಳುತ್ತಿದ್ದು, ರಾಜೀನಾಮೆ ನೀಡಿದ ದಿನವೇ 10 ಸಾವಿರ ಪೋನು ಕರೆ, 2 ಸಾವಿರ ಸಂದೇಶಗಳು ಬಂದಿದೆ.  ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ವಾಟ್ಸಾಪ್ ನಲ್ಲಿ ಅಣ್ಣಾ ಮಲೈ ಪೋಟೊ ಹಾಕಿ ಮಿಸ್ ಯು ಎಂದು ಸ್ಟೇಟಸ್ ಹಾಕಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಸ್ಲಿಂ ಲೀಗ್‌, ಜಿನ್ನಾಗೆ ಮಣಿದ ನೆಹರು, ವಂದೇ ಮಾತರಂ ಅನ್ನು ಹರಿದು ಹಾಕಿದ್ದು ಕಾಂಗ್ರೆಸ್‌: ಮೋದಿ ವಾಗ್ದಾಳಿ
ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ