
ಚೆನ್ನೈ: ಎಲ್ಲ ವಯೋಮಾನದ ಮಹಿಳೆಯರಿಗೂ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಅನುವು ಮಾಡಿಕೊಡಬೇಕೆಂಬ ಸುಪ್ರೀಂ ಕೋರ್ಟ್ ತೀರ್ಪಿನ ಜಾರಿ ವೇಳೆ ಶಬರಿಮಲೆಯಲ್ಲಿ ಉಂಟಾದ ಗಲಭೆ ರೀತಿಯ ವಾತಾವರಣದ ಬೆನ್ನಲ್ಲೇ, ದೇವಸ್ಥಾನದ ಸಂಪ್ರದಾಯ ವಿಚಾರಗಳಲ್ಲಿ ಯಾರೊಬ್ಬರೂ ಹಸ್ತಕ್ಷೇಪ ಮಾಡಬಾರದು ಎದು ಸೂಪರ್ಸ್ಟಾರ್ ರಜನೀಕಾಂತ್ ಅವರು ಹೇಳಿದ್ದಾರೆ.
ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತಂತೆ ಇದೇ ಮೊದಲ ಬಾರಿಗೆ ಮೌನ ಮುರಿದಿರುವ ಅವರು, ‘ದೀರ್ಘಕಾಲದಿಂದ ಯಾವುದೇ ದೇವಸ್ಥಾನ ಪಾಲಿಸಿಕೊಂಡು ಬರುತ್ತಿರುವ ಸಂಪ್ರದಾಯಗಳಲ್ಲಿ ಹಸ್ತಕ್ಷೇಪ ಮಾಡಬಾರದು,’ ಎಂದು ಪ್ರತಿಪಾದಿಸಿದರು.
ಎಲ್ಲ ರಂಗಗಳಲ್ಲಿಯೂ ಮಹಿಳೆಯರಿಗೆ ಸಮಾನ ಹಕ್ಕು ಇರಬೇಕು ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ದೇವಸ್ಥಾನ ವಿಚಾರಕ್ಕೆ ಬಂದಾಗ, ಪ್ರತೀ ದೇವಾಲಯಗಳು ಕೆಲವೊಂದು ಆಚಾರ-ವಿಚಾರಗಳನ್ನು ಪಾಲನೆ ಮಾಡಿಕೊಂಡು ಬಂದಿವೆ. ಈ ವಿಚಾರಗಳಲ್ಲಿ ಯಾರೊಬ್ಬರೂ ಸಹ ಹಸ್ತಕ್ಷೇಪ ಮಾಡಬಾರದು ಎಂದು ಅಭಿಪ್ರಾಯಪಟ್ಟರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.