ಅಯೋಧ್ಯೆ ತೀರ್ಪು: ವಾಟ್ಸಪ್, ಟ್ವಿಟ್ಟರ್ ಮೇಲೆ ಸರ್ಕಾರದ ನಿಯಂತ್ರಣ!

Published : Nov 04, 2019, 04:46 PM IST
ಅಯೋಧ್ಯೆ ತೀರ್ಪು: ವಾಟ್ಸಪ್, ಟ್ವಿಟ್ಟರ್ ಮೇಲೆ ಸರ್ಕಾರದ ನಿಯಂತ್ರಣ!

ಸಾರಾಂಶ

ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂವಿವಾದ ತೀರ್ಪಿನ ಹಿನ್ನೆಲೆ| ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ ಹೇರಲು ಮುಂದಾದ ಯುಪಿ ಸರ್ಕಾರ| ಕೋಮು ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಜವಾಬ್ದಾರಿ ಹೊತ್ತಿರುವ ಉತ್ತರಪ್ರದೇಶ ಸರ್ಕಾರ| ಪ್ರಚೋದನಕಾರಿ ಸುದ್ದಿ ಹರಡದಂತೆ ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ| ಪ್ರಚೋದಕಾರಿ ವಿಷಯಗಳನ್ನು ಹಂಚಿಕೊಳ್ಳದಂತೆ ನಿರ್ಬಂಧ ವಿಧಿಸಿ ಆದೇಶ| ವಿದ್ಯುನ್ಮಾನ ಮಾಧ್ಯಮಗಳಲ್ಲಿ ತೀರ್ಪಿನ ಕುರಿತು ಚರ್ಚೆಗೆ ನಿರ್ಬಂಧ|

ಲಕ್ನೋ(ನ.04): ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂವಿವಾದ ತೀರ್ಪಿನ ಹಿನ್ನೆಲೆಯಲ್ಲಿ, ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ ಸಾಧಿಸಲು ಉತ್ತರಪ್ರದೇಶ ಸರ್ಕಾರ ಮುಂದಾಗಿದೆ.

ಕೊನೆಗೂ ಮುಗೀತು ವಿಚಾರಣೆ: ಅಯೋಧ್ಯೆ ತೀರ್ಪಿಗೆ ದಿನಗಣನೆ!

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಇದೇ ತಿಂಗಳ 17ರಂದು ನಿವೃತ್ತರಾಗಲಿದ್ದು, ಇದಕ್ಕೂ ಮೊದಲೇ ಅಯೋಧ್ಯೆ ಭೂವಿವಾದ ಕುರಿತ ಅಂತಿಮ ತೀರ್ಪು ಹೊರ ಬೀಳಲಿದೆ ಎನ್ನಲಾಗಿದೆ. 

ಈ ಹಿನ್ನೆಲೆಯಲ್ಲಿ ಕೋಮು ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಜವಾಬ್ದಾರಿ ಹೊತ್ತಿರುವ ಉತ್ತರಪ್ರದೇಶ ಸರ್ಕಾರ, ಪ್ರಚೋದನಕಾರಿ ಸುದ್ದಿ ಹರಡದಂತೆ ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ ಹೇರಲು ಬಯಸಿದೆ.

ಡಿಸೆಂಬರ್ 6ರಿಂದ ಮಂದಿರ ನಿರ್ಮಾಣ ಶುರು: ಸಾಕ್ಷಿ ಮಹಾರಾಜ್ ಭವಿಷ್ಯ ನುಡಿದರು!

ವಾಟ್ಸಪ್, ಟ್ವೀಟರ್, ಟೆಲಿಗ್ರಾಮ್ ಹಾಗೂ ಇನ್‌ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಪ್ರಚೋದಕಾರಿ ವಿಷಯಗಳನ್ನು ಹಂಚಿಕೊಳ್ಳದಂತೆ ನಿರ್ಬಂಧ ವಿಧಿಸಿ ಉತ್ತರಪ್ರದೇಶ ಸರ್ಕಾರ ಆದೇಶ ನೀಡಿದೆ. 

ಅಯೋಧ್ಯೆ ತೀರ್ಪು ಮುಸ್ಲಿಂ ಪರ ಬಂದರೆ ಮಸೀದಿ ಕಟ್ಟಲ್ಲ ಎಂದ ದಾವೇದಾರರು!

ತೀರ್ಪಿನ ಬಳಿಕ ಸುಮಾರು ಎರಡು ತಿಂಗಳ ಕಾಲ ಅಯೋಧ್ಯೆಯಲ್ಲಿ ಈ ನಿರ್ಬಂಧ ಮುಂದುವರಿಯಲಿದ್ದು, ವಿದ್ಯುನ್ಮಾನ ಮಾಧ್ಯಮಗಳಲ್ಲಿ ತೀರ್ಪಿನ ಕುರಿತು ಯಾವುದೇ ಚರ್ಚೆಯನ್ನು ನಡೆಸದಂತೆ ರಾಜ್ಯ ಸರ್ಕಾರ ನಿರ್ಬಂಧ ಹೇರಿದೆ ಎನ್ನಲಾಗಿದೆ.
'ಅಯೋಧ್ಯೆ ಬಗ್ಗೆ ಮಾತು ಆಡುವಾಗ ಹುಷಾರ್‌' ಸಚಿವರಿಗೆ ಸಿಎಂ ವಾರ್ನಿಂಗ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!