ನಿವೃತ್ತ ಪೊಲೀಸ್ ಅಧಿಕಾರಿ ಕೊಲೆ

First Published Jun 27, 2018, 12:37 PM IST
Highlights

ಮೂಲತಃ ಕನಕಪುರ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ನಿವಾಸಿಯಾಗಿರುವ ಸಿದ್ದಲಿಂಗಯ್ಯ  ಬೆಂಗಳೂರಿನ ಜರಗನಹಳ್ಳಿಯಲ್ಲಿ ವಾಸವಾಗಿದ್ದರು.  ಸಿದ್ದಲಿಂಗಯ್ಯರ ಮನೆಯಲ್ಲೇ ವಾಸವಾಗಿದ್ದ ಶಂಕರ್ ಎಂಬಾತನೇ ಕೊಲೆ ಮಾಡಿದ್ದಾನೆ.  

 

ಬೆಂಗಳೂರು (ಜೂ. 27): ಸಿಸಿಬಿ ಕ್ರೈಂ ಬ್ರ್ಯಾಂಚ್'ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಸಿದ್ದಲಿಂಗಯ್ಯ ಎನ್ನುವವರನ್ನು ಕೊಲೆ ಮಾಡಲಾಗಿದೆ.  

ಮೂಲತಃ ಕನಕಪುರ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ನಿವಾಸಿಯಾಗಿರುವ ಸಿದ್ದಲಿಂಗಯ್ಯ  ಬೆಂಗಳೂರಿನ ಜರಗನಹಳ್ಳಿಯಲ್ಲಿ ವಾಸವಾಗಿದ್ದರು.  ಸಿದ್ದಲಿಂಗಯ್ಯರ ಮನೆಯಲ್ಲೇ ವಾಸವಾಗಿದ್ದ ಶಂಕರ್ ಎಂಬಾತನೇ ಕೊಲೆ ಮಾಡಿದ್ದಾನೆ.   ಕಣ್ಣಿಗೆ ಖಾರದಪುಡಿ ಎರಚಿ ಗೌಡಗೆರೆ ಗೇಟ್ ಬಳಿ ಶಂಕರ್ ಕೊಲೆ ಮಾಡಿ  ಕೊಲೆ ಮಾಡಿ ನಂತರ ಚನ್ನಪಟ್ಟಣದ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. 

ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತದೇಹ ಇಡಲಾಗಿದೆ. 

click me!