ಸಂಜಯ್ ದತ್ ನಿಯಮ ಉಲ್ಲಂಘಿಸಿದ್ದರೆ ಮತ್ತೆ ಜೈಲಿಗೆ ಕಳುಹಿಸಿ; ಮಹಾ ಸರ್ಕಾರ

Published : Jul 27, 2017, 04:15 PM ISTUpdated : Apr 11, 2018, 01:07 PM IST
ಸಂಜಯ್ ದತ್ ನಿಯಮ ಉಲ್ಲಂಘಿಸಿದ್ದರೆ ಮತ್ತೆ ಜೈಲಿಗೆ ಕಳುಹಿಸಿ; ಮಹಾ ಸರ್ಕಾರ

ಸಾರಾಂಶ

1993 ರ ಸ್ಫೋಟ ಪ್ರಕರಣದಲ್ಲಿ 5 ವರ್ಷ ಜೈಲುಶಿಕ್ಷೆಗೆ ಒಳಗಾಗಿರುವ ನಟ ಸಂಜಯ್ ದತ್  ಶಿಕ್ಷಾ ಅವಧಿ ಪೂರ್ಣಗೊಳ್ಳುವ 8 ತಿಂಗಳ ಮೊದಲೇ ವಿಐಪಿ ಎಂದು ಪೆರೋಲ್ ಮೇಲೆ ಬಿಡುಗಡೆ ಮಾಡಿದ್ದರೆ ಅವರನ್ನು ಮತ್ತೊಮ್ಮೆ ಜೈಲಿಗೆ ಕಳುಹಿಸಬೇಕು ಎಂದು ಮಹಾರಾಷ್ಟ್ರ ಸರ್ಕಾರ ಬಾಂಬೆ ಹೈಕೋರ್ಟ್’ಗೆ ಹೇಳಿದೆ.

ನವದೆಹಲಿ (ಜು.27): 1993 ರ ಸ್ಫೋಟ ಪ್ರಕರಣದಲ್ಲಿ 5 ವರ್ಷ ಜೈಲುಶಿಕ್ಷೆಗೆ ಒಳಗಾಗಿರುವ ನಟ ಸಂಜಯ್ ದತ್  ಶಿಕ್ಷಾ ಅವಧಿ ಪೂರ್ಣಗೊಳ್ಳುವ 8 ತಿಂಗಳ ಮೊದಲೇ ವಿಐಪಿ ಎಂದು ಪೆರೋಲ್ ಮೇಲೆ ಬಿಡುಗಡೆ ಮಾಡಿದ್ದರೆ ಅವರನ್ನು ಮತ್ತೊಮ್ಮೆ ಜೈಲಿಗೆ ಕಳುಹಿಸಬೇಕು ಎಂದು ಮಹಾರಾಷ್ಟ್ರ ಸರ್ಕಾರ ಬಾಂಬೆ ಹೈಕೋರ್ಟ್’ಗೆ ಹೇಳಿದೆ.

5 ವರ್ಷ ಶಿಕ್ಷಾವಧಿ ಪೂರ್ಣಗೊಳ್ಳುವ 8 ತಿಂಗಳ ಮೊದಲೇ ಸಂಜಯ್ ದತ್’ರನ್ನು ಸನ್ನಡತೆ ಆಧಾರದ ಮೇಲೆ ಸರ್ಕಾರ ಪೆರೋಲ್ ಮೇಲೆ ಬಿಡುಗಡೆ ಮಾಡಿತ್ತು. ಸರ್ಕಾರದ ಈ ಕ್ರಮದ ಬಗ್ಗೆ ಬಾಂಬೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸುತ್ತಾ, ಸ್ಪಷ್ಟೀಕರಣ ಕೇಳಿತ್ತು. ಸಂಜಯ್ ದತ್ ಜೈಲಿನಲ್ಲಿದ್ದಾಗ ಉತ್ತಮ ನಡತೆ ಹೊಂದಿದ್ದರು. ಆ ಆಧಾರದ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು  ಮಹಾ ಸರ್ಕಾರ ಹೇಳಿತ್ತು.

ಒಂದು ವೇಳೆ ಸಂಜಯ್ ದತ್ ನಿಯಮವನ್ನು ಉಲ್ಲಂಘಿಸಿದ್ದರೆ ಅವರನ್ನು ಮತ್ತೆ ಜೈಲಿಗೆ ಕಳುಹಿಸಿ ಎಂದು ಮಹಾ ಸರ್ಕಾರ ಬಾಂಬೆ ಹೈಕೋರ್ಟ್’ಗೆ ಇಂದು ಹೇಳಿದೆ.   

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೈಸೂರು ಏಕತಾ ಮಹಲ್‌ ವಿವಾದ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!
ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ