ಎಂಜಿನಿಯರಿಂಗ್ ಶಿಕ್ಷಣದಲ್ಲಿ ವೇದ, ತರ್ಕ, ಉಪನಿಷತ್ತು

Published : Jan 26, 2018, 09:30 AM ISTUpdated : Apr 11, 2018, 01:10 PM IST
ಎಂಜಿನಿಯರಿಂಗ್ ಶಿಕ್ಷಣದಲ್ಲಿ ವೇದ, ತರ್ಕ, ಉಪನಿಷತ್ತು

ಸಾರಾಂಶ

ಎಂಜಿನಿಯರಿಂಗ್ ಶಿಕ್ಷಣಕ್ಕೆ ಪಠ್ಯ ಸಿದ್ಧಪಡಿಸುವ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು (ಎಐಸಿಟಿಇ) ಮುಂದಿನ ಸಾಲಿಗೆ ಪಠ್ಯ ಪರಿಷ್ಕರಿಸಿದೆ.

ನವದೆಹಲಿ: ಎಂಜಿನಿಯರಿಂಗ್ ಶಿಕ್ಷಣಕ್ಕೆ ಪಠ್ಯ ಸಿದ್ಧಪಡಿಸುವ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು (ಎಐಸಿಟಿಇ) ಮುಂದಿನ ಸಾಲಿಗೆ ಪಠ್ಯ ಪರಿಷ್ಕರಿಸಿದೆ. ಈ ಪ್ರಕಾರ, ಮುಂದಿನ ವರ್ಷದಿಂದ ಎಂಜಿನಿಯರಿಂಗ್ ಪದವಿಯಲ್ಲಿ ಓದುತ್ತಿರುವವರು ವೇದ, ಪುರಾಣ ಹಾಗೂ ತರ್ಕಶಾಸ್ತ್ರವನ್ನೂ ಕಲಿಯಬೇಕಾಗುತ್ತದೆ. ಇದರ ಜತೆಗೆ ಸಂವಿಧಾನ ಹಾಗೂ ಪರಿಸರ ಶಿಕ್ಷಣ ಕೋರ್ಸುಗಳನ್ನೂ ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ.

‘ಮುಂಬರುವ ಶಿಕ್ಷಣ ವರ್ಷದಿಂದಲೇ ಹೊಸ ಪಠ್ಯ ಜಾರಿಗೊಳಿಸಲಾಗುತ್ತದೆ’ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಎಂಜಿನಿಯರಿಂಗ್ ಸೇರಿಕೊಂಡ ಕೂಡಲೇ ವಿದ್ಯಾರ್ಥಿಗೆ ವೇದ, ಉಪನಿಷತ್ತಿನಂಥ ಮೂಲ ಚಿಂತನೆಗಳ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಅಗತ್ಯ ಇರುವ ಭಾಷಾ ಕೌಶಲ್ಯವನ್ನೂ ಕಲಿಸಲಾಗುತ್ತದೆ ಎಂದು ಎಐಸಿಟಿಇ ಅಧ್ಯಕ್ಷ ಅನಿಲ್ ಸಹಸ್ರಬುದ್ಧೆ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಪಿಎಲ್ ಕಾರ್ಡ್ ಆದಾಯ ಮಿತಿ 1.80 ಲಕ್ಷಕ್ಕೆ ಏರಿಕೆ? ಸಚಿವ ಮುನಿಯಪ್ಪ ಕೊಟ್ಟ ಬಿಗ್ ಅಪ್ಡೇಟ್ ಏನು?
ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಕಡೆಗಣನೆಗೆ ಕರವೇ ಕೆಂಡ; ನಾರಾಯಣ ಗೌಡರ ಹೋರಾಟಕ್ಕೆ ಮಣಿದು ಹೊಸ ಅಧಿಸೂಚನೆ ಹೊರಡಿಸಿದ ಇಲಾಖೆ!