
ಬೆಂಗಳೂರು[ಮಾ.07]: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ‘ರಿಮೋಟ್ ಸಿಎಂ’ ಎಂದು ಟೀಕಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಯಾರೋ ಬರೆದುಕೊಟ್ಟಿದ್ದನ್ನು ಓದಿದ್ದಾರೆ. ಇದು ಅವರ ಹುದ್ದೆಗೆ ಶೋಭೆ ತರುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರ ಬಗ್ಗೆ ನನಗೆ ಗೌರವ ಇದೆ. ಆದರೆ, ಒಬ್ಬ ಪ್ರಧಾನಿ ಹುದ್ದೆಯಲ್ಲಿರುವವರು ಯಾರೋ ಬರೆದುಕೊಟ್ಟಿದ್ದನ್ನು ಓದುವುದು, ಸುಳ್ಳು ಹೇಳುವುದು ಅವರ ಹುದ್ದೆಗೆ ತಕ್ಕುದಲ್ಲ. ನಿಜವಾದ ಮಾಹಿತಿ ಪಡೆದು ಮಾತನಾಡಬೇಕು. ರೈತರ ಸಾಲ ಮನ್ನಾ ಸೇರಿದಂತೆ ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ನಾಯಕರು ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.
ಮೈತ್ರಿ ಸರ್ಕಾರ ರೈತರನ್ನು ನಿರ್ಲಕ್ಷಿಸುತ್ತಿದೆ, ‘ಪ್ರಧಾನಮಂತ್ರಿ ಕಿಸಾನ್’ ಯೋಜನೆಗೆ ರೈತರ ಪಟ್ಟಿಕೊಟ್ಟಿಲ್ಲ ಎಂದು ಪ್ರಧಾನಿ ಆರೋಪಿಸಿದ್ದಾರಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಫೆ.1ರಂದು ಮಂಡನೆಯಾದ ಕೇಂದ್ರ ಸರ್ಕಾರದ ಬಜೆಟ್ನಲ್ಲಿ ಆ ಯೋಜನೆ ಘೋಷಿಸಲಾಗಿದೆ. ಇಷ್ಟುಬೇಗ ಪಟ್ಟಿಒದಗಿಸಲಾಗುತ್ತದಾ? ಕೇಂದ್ರದಿಂದ ಸೂಚನೆ ಬರಬೇಕು. ನಂತರ ಸರ್ಕಾರ ರೈತರಿಂದ ಮಾಹಿತಿ ಪಡೆದು ಸಲ್ಲಿಸಬೇಕು. ಕೇಂದ್ರ ಸರ್ಕಾರ ಯೋಜನೆ ಘೋಷಣೆಗೂ ಮೊದಲೇ ಮಾಹಿತಿ ತರಿಸಿಕೊಳ್ಳಬೇಕಿತ್ತು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.