‘ರೇವಣ್ಣ, ಪುಟ್ಟರಾಜು, ಜಮೀರ್ ರಾಜೀನಾಮೆಗೆ ಆಗ್ರಹ’

Published : May 25, 2019, 01:54 PM IST
‘ರೇವಣ್ಣ, ಪುಟ್ಟರಾಜು, ಜಮೀರ್ ರಾಜೀನಾಮೆಗೆ ಆಗ್ರಹ’

ಸಾರಾಂಶ

ರಾಜ್ಯದಲ್ಲಿ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿ ಬಿಜೆಪಿ 25 ಸ್ಥಾನಗಳಲ್ಲಿ ಗೆಲುವು ತನ್ನದಾಗಿಸಿಕೊಂಡಿದೆ. ಇದೇ ವೇಳೆ ಚುನಾವಣೆಗೆ ಮೊದಲು ಕೆಲವು ನಾಯಕರು ಆಡಿದ ಮಾತಿನಂತೆ ನಡೆದುಕೊಳ್ಳಿ ಎಂದು ಆಗ್ರಹಿಸಲಾಗಿದೆ.

ಬೆಂಗಳೂರು : ಲೋಕಸಭಾ ಚುನಾವಣೆ ಮುಗಿದಿದೆ. ಬಿಜೆಪಿ ನಾಯಕರು ಗೆಲುವಿನ ಖುಷಿಯಲ್ಲಿದ್ದಾರೆ. ಇದೇ ವೇಳೆ ಬಿಜೆಪಿ ಮುಖಂಡರು ಜೆಡಿಎಸ್-ಕಾಂಗ್ರೆಸ್  ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ನಿಂಬೆಹಣ್ಣು ರೇವಣ್ಣ ರಾಜಕೀಯ ಸನ್ಯಾಸ ತೆಗೆದುಕೊಳ್ಳುವುದಾಗಿ ಹೇಳಿದ್ದರು. ಇನ್ನು ಸಚಿವ ಪುಟ್ಟರಾಜು ಹಾಗೂ ಶಾಸಕ ವಾಸು ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಅವರೆಲ್ಲರೂ ಕೂಡ ನುಡಿದಂತೆ ನಡೆದುಕೊಳ್ಳಲಿ ಎಂದರು. 

ಇನ್ನು ಜಮೀರ್ ಅಹಮದ್ ಕೂಡ ವಾಚ್ ಮನ್ ಆಗುವುದಾಗಿ ಹೇಳಿದ್ದು, ಕೊಟ್ಟ ಮಾತು ತಪ್ಪದಿರಲಿ ಎಂದು ಆರ್. ಅಶೋಕ ವ್ಯಂಗ್ಯವಾಡಿದರು. 

ಇನ್ನು ಕೈ ನಾಯಕ ಸಿದ್ದರಾಮಯ್ಯ ನಿತ್ಯವೂ ಕೂಡ ಯಡಿಯೂರಪ್ಪ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಹೇಳುತ್ತಾರೆ. ಆದರೆ ಸಿದ್ದರಾಮಯ್ಯ ಏನು ಹೇಳುತ್ತಾರೋ ಅದರ ವಿರುದ್ಧ ಫಲಿತಾಂಶವೇ ಬರುತ್ತದೆ. ಆದ್ದರಿಂದ ಅವರು ಹಾಗೆ ಹೇಳುತ್ತಲೇ ಇರಲಿ ಎಂದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇಂಟರ್ನೆಟ್ ಇಲ್ಲದೆಯೂ UPI ಪಾವತಿ ಮಾಡಬಹುದು, *99# ಮೂಲಕ ಹಣ ಕಳುಹಿಸುವುದು ಹೇಗೆ?
ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್