ನಟ ದಿ.ಕಲ್ಯಾಣ್ ಕುಮಾರ್ ಪತ್ನಿ ನಿಧನ

Published : Dec 25, 2017, 09:32 PM ISTUpdated : Apr 11, 2018, 01:13 PM IST
ನಟ ದಿ.ಕಲ್ಯಾಣ್ ಕುಮಾರ್ ಪತ್ನಿ ನಿಧನ

ಸಾರಾಂಶ

ನಟ ಕಲ್ಯಾಣ್ ಕುಮಾರ್ ಅವರ ವೃತ್ತಿ ಬದುಕಿನ ಯಶಸ್ಸಿಗೆ ದೊಡ್ಡ ಶಕ್ತಿಯಾಗಿದ್ದ ರೇವತಿಯವರು, ಹುಟ್ಟು ಕಲಾವಿದರ ಕುಟುಂಬದಿಂದಲೇ ಬಂದವರು. ಅವರ ತಾಯಿ ಸರೋಜಮ್ಮ ಕೂಡ ಕಲಾವಿದೆಯಾಗಿದ್ದರು.

ಕನ್ನಡ ಚಿತ್ರರಂಗದ ಹಿರಿಯ ನಟ ದಿವಂಗತ ಕಲ್ಯಾಣ್ ಕುಮಾರ್ ಪತ್ನಿ ರೇವತಿ ಕಲ್ಯಾಣ್ ಕುಮಾರ್ ಶನಿವಾರ (ಡಿ.23) ತಡರಾತ್ರಿ 2.30ಕ್ಕೆ ನಿಧನರಾದರು.

ಅವರಿಗೆ 80 ವರ್ಷ ವಯಸ್ಸಾಗಿತ್ತು. ವಿಠಲಾಚಾರ್ಯ ಅವರು ನಿರ್ಮಿಸಿದ ‘ರಾಜಲಕ್ಷ್ಮೀ’ ಚಿತ್ರದ ಮೂಲಕ ನಾಯಕಿಯಾಗಿ ಬೆಳ್ಳಿತೆರೆಗೆ ಪಾದಾರ್ಪಣಿ ಮಾಡಿದ್ದ ರೇವತಿ ಅವರು, ಚೆನ್ನೈನಲ್ಲಿರುವ ತಮ್ಮ ನಿವಾಸದಲ್ಲಿ ತೀವ್ರ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.

ನಟ ಕಲ್ಯಾಣ್ ಕುಮಾರ್ ಅವರ ವೃತ್ತಿ ಬದುಕಿನ ಯಶಸ್ಸಿಗೆ ದೊಡ್ಡ ಶಕ್ತಿಯಾಗಿದ್ದ ರೇವತಿಯವರು, ಹುಟ್ಟು ಕಲಾವಿದರ ಕುಟುಂಬದಿಂದಲೇ ಬಂದವರು. ಅವರ ತಾಯಿ ಸರೋಜಮ್ಮ ಕೂಡ ಕಲಾವಿದೆಯಾಗಿದ್ದರು. ಹೀಗಾಗಿ ರೇವತಿ ಅವರಿಗೂ ಚಿಕ್ಕದಿಂದಲೇ ಬಣ್ಣದ ನಂಟು ಬೆಳೆದಿತ್ತು. ‘ರಾಜಲಕ್ಷ್ಮೀ’ ಚಿತ್ರದೊಂದಿಗೆ ನಟಿಯಾಗಿ ಬೆಳ್ಳಿತೆರೆಗೆ ಬಂದ ಅವರು, ನಂತರ ಚಿತ್ತ ನಿರ್ಮಾಪಕರು ಆದರು. 1959ರಲ್ಲಿ ‘ಮನೆಗೆ ಬಂದ ಮಹಾಲಕ್ಷ್ಮೀ’ ಚಿತ್ರವನ್ನು ನಿರ್ಮಾಣ ಮಾಡಿದರು. ಅಲ್ಲದೆ, ‘ಎಂದೂ

ನಿನ್ನವನೆ’, ‘ಕಲ್ಲು ಸಕ್ಕರೆ’, ‘ಪ್ರವಾಸಿ ಮಂದಿರ’ ಚಿತ್ರಗಳು ಅವರದೇ ನಿರ್ಮಾಣದಲ್ಲಿ ಬಂದವು. ನಟಿ, ನಿರ್ಮಾಪಕಿಯೂ ಆಗಿದ್ದರಲ್ಲದೆ, ಉತ್ತಮ ಬರಹಗಾರ್ತಿಯಾಗಿಯೂ ಗುರುತಿಸಿಕೊಂಡಿದ್ದರು. ಹಲವು ಕಥೆ-ಕಾದಂಬರಿಗಳನ್ನೂ ಬರೆದಿದ್ದರು. ಸಾಕಷ್ಟು ಚಿತ್ರಗಳಿಗೆ ಸಂಭಾಷಣೆ ಬರೆದಿದ್ದರು.

‘ಪ್ರವಾಸಿ ಮಂದಿರ’ ಚಿತ್ರಕ್ಕೆ ಗೀತೆಯೊಂದನ್ನು ರಚಿಸಿದ್ದರು. ಅವರಿಗೆ ‘ನಾಟಕ ಅಕಾಡೆಮಿ’, ‘ರಾಜ್ಯೋತ್ಸವ’ ಪ್ರಶಸ್ತಿ ಪಡೆದಿದ್ದ ರೇವತಿ ಕಲ್ಯಾಣ್ ಕುಮಾರ್ ಅಪಾರ ಅಭಿಮಾನಿ ಬಳಗವನ್ನು ಆಗಲಿದ್ದಾರೆ. ಸೋಮವಾರ (ಡಿ.25) ಮಧ್ಯಾಹ್ನ ಚೆನ್ನೈನ ವಿಜಯ ಚಿತಾಗಾರದಲ್ಲಿ ಅಂತಿಮ ವಿಧಿಗಳು ನಡೆಯಲಿವೆ ಎಂದು ಪುತ್ರ ಭರತ್ ಕಲ್ಯಾಣ್ ತಿಳಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜನವರಿ 1, 2026 ರಿಂದ 10 ನಿಯಮಗಳಲ್ಲಿ ಬದಲಾವಣೆ, ಸಂಬಳ-ಪಡಿತರ ಮೇಲೆ ನೇರ ಪರಿಣಾಮ
ಪಾಕಿಸ್ತಾನ ಸೇನೆಯಲ್ಲಿರುವ ಮಹಿಳಾ ಸೇನಾಧಿಕಾರಿಗಳ ಸಂಖ್ಯೆ ಎಷ್ಟು?