
ಕೊಲಂಬೋ: 321ಕ್ಕೂ ಹೆಚ್ಚು ಅಮಾಯಕರ ಬಲಿಪಡೆದ ಶ್ರೀಲಂಕಾದ ಸರಣಿ ಸ್ಫೋಟ ಘಟನೆಗಳ ಪೈಕಿ ಐಷಾರಾಮಿ ಶಾಂಗ್ರಿಲಾ ಹಾಗೂ ಸಿನ್ನಮೋನ್ ಗ್ರಾಂಡ್ ಹೋಟೆಲ್ಗಳ ಮೇಲೆ ದಾಳಿ ನಡೆಸಿದ್ದು ಕೊಲೊಂಬೋದ ಸಿರಿವಂತ ಮುಸ್ಲಿಂ ಉದ್ಯಮಿಯ ಪುತ್ರರು ಎಂಬ ವಿಚಾರ ಇದೀಗ ಬಯಲಾಗಿದೆ. ಅಲ್ಲದೆ, ಉಗ್ರರು ನಾಲ್ಕನೇ ಹೋಟೆಲ್ ಮೇಲೆಯೂ ಬಾಂಬ್ ದಾಳಿ ಮಾಡಲು ಯೋಜಿಸಿದ್ದರು. ಆದರೆ, ಈ ದಾಳಿ ವಿಫಲಗೊಂಡಿದೆ ಎಂಬ ವಿಚಾರವೂ ಬೆಳಕಿಗೆ ಬಂದಿದೆ.
ಕೊಲಂಬೋದಲ್ಲಿ ಸಂಬಾತ ಪದಾರ್ಥಗಳ ಉದ್ಯಮ ನಡೆಸುವ ಶ್ರೀಮಂತ ಉದ್ಯಮಿಯೊಬ್ಬರ ಇಬ್ಬರು ಮಕ್ಕಳು ಶನಿವಾರವೇ ಪ್ರತ್ಯೇಕವಾಗಿ ಎರಡೂ ಹೋಟೆಲ್ಗಳಲ್ಲಿ ಕೊಠಡಿ ಕಾದಿರಿಸಿದ್ದರು. ಭಾನುವಾರ ಬೆಳಗ್ಗೆ ಎರಡೂ ಹೋಟೆಲ್ಗಳಲ್ಲಿ ಈಸ್ಟರ್ ಉಪಾಹಾರ ಕಾರ್ಯಕ್ರಮ ಆರಂಭವಾಗುತ್ತಲೇ, ಸೋದರರಿಬ್ಬರೂ ಒಂದೇ ಸಮಯಕ್ಕೆ ಎರಡೂ ಹೋಟೆಲ್ಗಳಲ್ಲಿ ದಾಳಿ ನಡೆಸಿದ್ದರು ಎಂಬ ವಿಷಯ ಬೆಳಕಿಗೆ ಬಂದಿದೆ.
4ನೇ ಹೋಟೆಲ್ ದಾಳಿ ವಿಫಲ: ಈ ನಡುವೆ ಉಗ್ರರು ಮತ್ತೊಂದು ಹೋಟೆಲ್ ಮೇಲೆ ದಾಳಿಗೆ ಯೋಜಿಸಿದ್ದರು. ಈ ಪ್ರಕಾರ ಉಗ್ರ ಸಂಘಟನೆಯ ಗ್ಯಾಂಗ್ನ ಬಾಂಬರ್ ಒಬ್ಬ ಈ ದಾಳಿಯ ಕೃತ್ಯ ನಡೆಸುವ ಹಿಂದಿನ ದಿನವೇ ಹೋಟೆಲ್ಗೆ ಹೋಗಿದ್ದ. ತನ್ನ ವಿಳಾಸ ನಮೂದಿಸಿ ರೂಮ್ ಬುಕ್ ಸಹ ಮಾಡಿದ್ದ. ಅಲ್ಲದೆ, ಭಾನುವಾರ ಬಾಂಬರ್ ಹೋಟೆಲ್ನಲ್ಲೇ ಇದ್ದರೂ, ಬಾಂಬ್ ಸ್ಫೋಟ ಮಾಡಲಿಲ್ಲ. ಈ ದಾಳಿ ವಿಫಲಗೊಂಡಿತೇ ಅಥವಾ ಯಾವುದೇ ಕಾರಣಕ್ಕಾಗಿ ದಾಳಿ ನಡೆಸಲು ಉಗ್ರ ನಿರಾಕರಿಸಿದನೇ ಎಂಬ ಮಾಹಿತಿ ಖಚಿತವಾಗಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.