ಕಣಿವೆಗೆ ಗಿರೀಶ್, ಲಡಾಕ್‌ಗೆ ಮಾಥೂರ್ ಮೊದಲ ಲೆ. ಗವರ್ನರ್ ಆಗಿ ನೇಮಕ!

Published : Oct 31, 2019, 04:01 PM IST
ಕಣಿವೆಗೆ ಗಿರೀಶ್, ಲಡಾಕ್‌ಗೆ ಮಾಥೂರ್ ಮೊದಲ ಲೆ. ಗವರ್ನರ್ ಆಗಿ ನೇಮಕ!

ಸಾರಾಂಶ

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ | ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಗಳೆಂದು ವಿಭಜನೆ| ಲಡಾಕ್ ಕೇಂದ್ರಾಡಳಿತ ಪ್ರದೇಶದ ಮೊದಲ ಲೆಫ್ಟಿನೆಂಟ್ ಗವರ್ನರ್ ನೇಮಕ| ಲೆಫ್ಟಿನೆಂಟ್ ಗವರ್ನರ್ ಆಗಿ ರಾಧಾ ಕೃಷ್ಣ ಮಾಥೂರ್  ಪ್ರಮಾಣವಚನ| ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಮೊದಲ ಲೆಫ್ಟಿನೆಂಟ್ ಗವರ್ನರ್ ನೇಮಕ| ಲೆಫ್ಟಿನೆಂಟ್ ಗವರ್ನರ್ ಆಗಿ ಗಿರೀಶ್ ಚಂದ್ರ ಮುರ್ಮು ಅಧಿಕಾರ ಸ್ವೀಕಾರ| 

ಶ್ರೀನಗರ(ಅ.31): ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಬಳಿಕ, ಕಣಿವೆಯನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಗಳೆಂದು ವಿಭಾಗಿಸಲಾಗಿದೆ.  

ಸತ್ಯಪಾಲ್​ ಮಲಿಕ್​ ಎತ್ತಂಗಡಿ: ಜಮ್ಮು-ಕಾಶ್ಮೀರ, ಲಡಾಖ್​​ಗೆ ಹೊಸ ಗವರ್ನರ್​ಗಳ ನೇಮಕ

ಅದರಂತೆ ಲಡಾಕ್ ಕೇಂದ್ರಾಡಳಿತ ಪ್ರದೇಶದ ಮೊದಲ ಲೆಫ್ಟಿನೆಂಟ್ ಗವರ್ನರ್ ಆಗಿ ರಾಧಾ ಕೃಷ್ಣ ಮಾಥೂರ್ ಇಂದು ಪ್ರಮಾಣವಚನ ಸ್ವೀಕರಿಸಿದರು.  ಜಮ್ಮು-ಕಾಶ್ಮೀರ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ನ್ಯಾಯಾಧೀಶ ಗೀತಾ ಮಿತ್ತಲ್ ಮಾಥೂರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

‘370 ರದ್ದತಿ ಅಪಹಾಸ್ಯ ಮಾಡಿದವರನ್ನು ಇತಿಹಾಸ ನೋಡಿಕೊಳ್ಳುತ್ತೆ’!

ಅಲ್ಲದೇ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶಗಳಿಗೆ ನೂತನ ಗವರ್ನರ್ ಆಗಿ ಗಿರೀಶ್ ಚಂದ್ರ ಮುರ್ಮು ಅಧಿಕಾರ ವಹಿಸಿಕೊಂಡರು. ಶ್ರೀನಗರದಲ್ಲಿ ನಡೆದ ಸಮಾರಂಭದಲ್ಲಿ ಮುರ್ಮು ಅವರಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ದಶಕಗಳ ಕಾಲ ಜಮ್ಮು -ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಸಂವಿಧಾನ ವಿಧಿ 370ನ್ನು ರದ್ದುಪಡಿಸಿದ ಸುಮಾರು 3 ತಿಂಗಳ ನಂತರ ಜಮ್ಮು ಮತ್ತು ಕಾಶ್ಮೀರ ಎಂದು ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳನ್ನಾಗಿ ರಚಿಸಲಾಗಿದೆ.

ಜಮ್ಮು ಕಾಶ್ಮೀರದಲ್ಲಿ ಇಂದಿನಿಂದ ಹೊಸ ಅಧ್ಯಾಯ! ಏನೇನು ಬದಲಾಗಲಿದೆ?


ಇದುವರೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯಪಾಲರಾಗಿದ್ದ ಸತ್ಯಪಾಲ್ ಮಲಿಕ್ ಅವರನ್ನು ಗೋವಾ ರಾಜ್ಯಪಾಲರಾಗಿ ವರ್ಗಾಯಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!