
ಚೆನ್ನೈ(ಡಿ.05): ತೀವ್ರ ಕುತೂಹಲ ಮೂಡಿಸಿದ್ದ ಆರ್.ಕೆ. ನಗರ ಉಪಚುನಾವಣೆಯ ನಟ ವಿಶಾಲ್ ಸ್ಪರ್ಧೆ ಮತ್ತೊಂದು ತಿರುವು ಪಡೆದುಕೊಂಡಿದ್ದು, ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ.
ನಾಮಪತ್ರ ಸಲ್ಲಿಸುವಾಗ ಮೂವರ ಸೂಚಕರ ಸಹಿಯಲ್ಲಿ ವ್ಯತ್ಯಾಸ ಕಂಡು ಬಂದ ಕಾರಣ ನಾಪತ್ರವನ್ನು ತಿರಸ್ಕರಿಸಲಾಗಿದೆ' ಎಂದು ಚುನಾವಣಾ ಆಯೋಗ ತಿಳಿಸಿದೆ. ಇದನ್ನು ಉದ್ದೇಶಪೂರ್ವಕವಾಗಿ ಮಾಡಲಾಗಿದ್ದು ಆರೋಪಿಸಿರುವ ನಟ ವಿಶಾಲ್ ಹಾಗೂ ಆತನ 50ಕ್ಕೂ ಬೆಂಬಲಿಗರು ಧರಣಿ ನಡೆಸಿದರು. ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ವಿಶಾಲ್ ಸ್ಪತಂತ್ರವಾಗಿ ಸ್ಪರ್ಧಿಸಿ ನಾಮಪತ್ರ ಸಲ್ಲಿಸಿದ್ದರು. ತಮಿಳು ಚಿತ್ರನಟ ಪ್ರಸ್ತುತ ದಕ್ಷಿಣ ಭಾರತ ಚಿತ್ರ ಕಲಾವಿದರ ಸಂಘದ ಹಾಗೂ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.