ಮಿತ್ರಪಕ್ಷದ ಶಾಸಕಗೆ ಸ್ಥಾನ : ನೂತನ ಸಚಿವರಾಗಿ 23 ಮಂದಿ ಪ್ರಮಾಣ

Published : Dec 24, 2018, 02:52 PM ISTUpdated : Dec 24, 2018, 03:02 PM IST
ಮಿತ್ರಪಕ್ಷದ ಶಾಸಕಗೆ ಸ್ಥಾನ : ನೂತನ ಸಚಿವರಾಗಿ 23 ಮಂದಿ ಪ್ರಮಾಣ

ಸಾರಾಂಶ

23 ಮಂದಿಗೆ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಅದರಲ್ಲಿ ಮಿತ್ರ ಪಕ್ಷಷದ ಓರ್ವಶಾಸಕನೂ ಕೂಡ ಸ್ಥಾನ ಪಡೆದುಕೊಂಡಿದ್ದಾರೆ. ರಾಜಸ್ಥಾನ ರಾಜ್ಯಪಾಲ ಕಲ್ಯಾಣ್ ಸಿಂಗ್ ಜೈಪುರದ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. 

ಜೈಪುರ : ಪಂಚರಾಜ್ಯ ಚುನಾವಣೆ ಮುಕ್ತಾಯವಾಗಿದ್ದು, ಈಗಾಗಲೇ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಏರಿದೆ. 

ರಾಜಸ್ಥಾನದಲ್ಲಿ ಅಶೋಕ್ ಗೆಹ್ಲೋಟ್ ನೇತೃತ್ವದಲ್ಲಿ ಸರ್ಕಾರ ರಚನೆಯಾಗಿದ್ದು,  ಸೋಮವಾರ 23 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. 22 ಮಂದಿ ಕಾಂಗ್ರೆಸಿಗರಾಗಿದ್ದು, ಇನ್ನೋರ್ವ ಮೈತ್ರಿ ಪಕ್ಷದ ಶಾಸಕಗೂ ಕೂಡ ಸಚಿವ ಸ್ಥಾನ ದೊರಕಿದೆ. ಆರ್ ಎಲ್  ಡಿ ಶಾಸಕ ಸುಭಾಷ್ ಗರ್ಗ್ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. 

ಜೈಪುರ್ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ  ರಾಜ್ಯಪಾಲ ಕಲ್ಯಾಣ ಸಿಂಗ್ 23 ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.

ಬಿ.ಡಿ ಕಲ್ಲಾ, ಶಾಂತಿ ಕುಮಾರ್ ದರಿವಾಲ, ಪರ್ಸಾದಿ ಲಾಲ್ ಮೀನ, ಬನ್ವರ್ ಲಾಲ್ ಮೇಘ್ವಾಲ್ , ಲಾಲ್ ಚಂದ್ ಕಟಾರಿಯಾ, ರಾಘು ಶರ್ಮ,  ಪ್ರಮೋದ್ ಜೈನ್ ಭಯ್ಯಾ,  ವಿಶ್ವೇಂದ್ರ ಸಿಂಗ್,  ಹರೀಶ್ ಚೌಧರಿ ಸೇರಿದಂತೆ ಅನೇಕರು ಈ ವೇಳೆ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. 

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್  ಮತ್ತು ಉಪ ಮುಖ್ಯಮಂತ್ರಿ ಸಚಿನ್ ಪೈಲಟ್  ಡಿಸೆಂಬರ್ 17 ರಂದು ಪ್ರಮಾಣ ವಚನ ಸ್ವೀಕರಿಸಿದ್ದರು.  ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯೊಂದಿಗೆ ಮೂರು ದಿನಗಳ ಕಾಲ ಸಭೆ ನಡೆಸಿ ವಿವಿಧ ರೀತಿಯಲ್ಲಿ ಚರ್ಚೆ ನಡೆಸಿದ ಬಳಿಕ ಸದ್ಯ ಮಿತ್ರಪಕ್ಷದ ಓರ್ವರಿಗೆ ಸ್ಥಾನ ನೀಡುವ ಮೂಲಕ 23 ಮಂದಿಗೆ ಸಚಿವ ಸ್ಥಾನ ನೀಡಲಾಗಿದೆ. 

ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯನ್ನು ಸೇರಿ ರಾಜಸ್ಥಾನದಲ್ಲಿ ಒಟ್ಟು 30 ಸಚಿವ ಸ್ಥಾನಗಳಿದ್ದು, ಸದ್ಯ ಕೆಲ ಸ್ಥಾನಗಳನ್ನು ಬಾಕಿ ಉಳಿಸಿಕೊಳ್ಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು