ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ಜವರಾಯನ ಅಟ್ಟಹಾಸಕ್ಕೆ 5 ಬಲಿ

Published : Jan 08, 2018, 09:29 AM ISTUpdated : Apr 11, 2018, 12:36 PM IST
ಬೆಳ್ಳಂಬೆಳಗ್ಗೆ ಭೀಕರ ಅಪಘಾತ;  ಜವರಾಯನ ಅಟ್ಟಹಾಸಕ್ಕೆ 5 ಬಲಿ

ಸಾರಾಂಶ

ಮೈಸೂರು ಪ್ರವಾಸ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಚಿತ್ರದುರ್ಗದ ಹೊರವಲಯದ ಸಿಬಾರದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಐವರು ಮೃತಪಟ್ಟಿದ್ದು, ಹಲವರಿಗೆ ತೀವ್ರವಾಗಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರಗೆ ದಾಖಲಿಸಲಾಗಿದೆ.

ಚಿತ್ರದುರ್ಗ(ಜ.08): ಸೋಮವಾರವಿಂದು ಸಾವಿನ ಸೋಮವಾರವಾಗಿ ಬದಲಾಗಿದೆ. ಬೆಂಗಳೂರಿನ ಬಾರ್'ವೊಂದರಲ್ಲಿ ಅಗ್ನಿ ಅವಘಡವಾದ ಬೆನ್ನಲ್ಲೇ, ಚಿತ್ರದುರ್ಗ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ರೂಸರ್-ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ.

ಮೈಸೂರು ಪ್ರವಾಸ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಚಿತ್ರದುರ್ಗದ ಹೊರವಲಯದ ಸಿಬಾರದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಐವರು ಮೃತಪಟ್ಟಿದ್ದು, ಹಲವರಿಗೆ ತೀವ್ರವಾಗಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರಗೆ ದಾಖಲಿಸಲಾಗಿದೆ.

ಮೃತರನ್ನು ಮನ್ಯಾಳು ಗ್ರಾಮದ ಸಿದ್ಧಾರ್ಥ, ರಾಕೇಶ್, ಶಿವಲಿಂಗು, ವಿನೋದ್, ಕ್ರೂಸರ್ ಶಿವಲಿಂಗ್ ಎಂದು ಗುರುತಿಸಲಾಗಿದೆ. ಇನ್ನು ಮನ್ಯಾಳು ಗ್ರಾಮದ 8 ಮಂದಿ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾರು ಅಪಘಾತದಲ್ಲಿ ಮುಂಡಗೋಡು ಗ್ರಾಮ ಲೆಕ್ಕಾಧಿಕಾರಿ ಸ್ಥಳದಲ್ಲೇ ಸಾವು, ಮತ್ತಿಬರಿಗೆ ಗಾಯ
ಭಾರತೀಯರ ಕ್ರೇಜ್, ದುಬೈನ ಶಾರುಖ್ ಖಾನ್ ಆಫೀಸ್ ಟವರ್ ಬರೋಬ್ಬರಿ 5000 ಕೋಟಿ ರೂ ಗೆ ಮಾರಾಟ!