
ನವದೆಹಲಿ (ಸೆ.13) ಆ್ಯಪಲ್ ಐಫೋನ್ 7 ಮತ್ತು ಐಫೋನ್ 7 ಪ್ಲಸ್ ಭಾರತಕ್ಕೆ ಕಾಲಿಟ್ಟು ಸದ್ದು ಮಾಡುತ್ತಿರುವ ಬೆನ್ನಲ್ಲೇ ಈ ಫೋನ್ ಗಳನ್ನು ಕೊಂಡೂಯ್ಯುತ್ತಿದ್ದ ಟ್ರಕ್ ಮೇಲೆ ದಾಳಿ ಮಾಡಿ ಚಾಲಕನ ಕಣ್ಣಿಗೆ ಖಾರದ ಪುಡಿ ಎರಚಿ ರೂ.60 ಸಾವಿರ ಮೌಲ್ಯದ ಫೋನುಗಳನ್ನು ದುಷ್ಕರ್ಮಿಗಳು ವಶಪಡಿಸಿಕೊಂಡಿದ್ದಾರೆ.
ರಾಜಧಾನಿ ದೆಹಲಿಯ ವಸಂತ್ ಕುಂಜಿ ಸಮೀತ ಈ ಘಟನೆ ನಡೆದಿದೆ. ಟ್ರಕ್ಕನ್ನು ವಶಪಡಿಸಿಕೊಂಡ ನಂತರ ರಂಗಪುರ್ ಪಹಾಡಿಗೆ ಕೊಂಡೊಯ್ದಿದ್ದಾರೆ. ಅಲ್ಲಿಂದ ತಮ್ಮ ಸ್ವಂತ ವಾಹನದಲ್ಲಿ ರೂ.2.5 ಕೋಟಿ ಮೌಲ್ಯದ 950 ಫೋನ್ ಗಳನ್ನು ಬೇರೆಡೆಗೆ ಸಾಗಿಸಿದ್ದಾರೆ.
ಟ್ರಕ್ ಚಾಲಕ ಕಲಾಂ ಸಿಂಗ್ ವಸಂತ್ ಕುಂಜಿ ಪೊಲೀಸ್ ಸ್ಟೇಶನ್ ನ ಸಂಪರ್ಕಿಸಿ ದರೋಡೆಯಾಗಿರುವ ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.