
ಬೆಂಗಳೂರು(ಆ.27): ವಿಧಾನ ಸೌಧದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ ಮನೆಯಲ್ಲಿ ಲಕ್ಷಾಂತರ ನಗದು ಹಾಗೂ ಚಿನ್ನಾಭರಣ ಕಳುವಾಗಿದೆ.
ವಿಧಾನಸೌಧದಲ್ಲಿ ಸಹಾಯಕ ಗ್ರಂಥಪಾಲಕರಾಗಿರುವ ವೆಂಕಟರಾಮು ಅವರ ಮೈಸೂರು ರಸ್ತೆಯ ಬಾಪೂಜಿ ಲೇಔಟ್'ನ ಬಾಡಿಗೆ ಮನೆಯಲ್ಲಿ ಬರೋಬ್ಬರಿ 36 ಲಕ್ಷ ನಗದು, 10 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ. ವೆಂಕಟರಾಮು ಅವರು ಹೊಸ ಬಾಡಿಗೆ ಮನೆಗೆ ವರ್ಗಾವಣೆಯಾಗುಗುವ ಹಿನ್ನಲೆಯಲ್ಲಿ ಹೊಸ ಮನೆಯಲ್ಲಿ ಹಾಲು ಉಕ್ಕಿಸಲು ಕುಟುಂಬ ಸಮೇತ ಹೋಗಿ ವಾಪಸ್ ಮನೆಗೆ ಬಂದಾಗ ಕಳ್ಳತನವಾಗಿರುವುದು ಗೊತ್ತಾಗಿದೆ. ಚಂದ್ರಲೇಔಟ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.