ಕಾವೇರಿ ಗ್ರಾಮೀಣ ಬ್ಯಾಂಕ್‌ನಲ್ಲಿ ದರೋಡೆ ; ಭಾರೀ ಪ್ರಮಾಣದ ಚಿನ್ನಾಭರಣ ಕಳುವು

Sep 4, 2018, 1:42 PM IST

ಮೈಸೂರು (ಸೆ. ೦4): ಇಲ್ಲಿನ ಎಚ್ ಡಿ ಕೋಟೆ ತಾಲೂಕಿನ ಕ್ಯಾತನಹಳ್ಳಿಯಲ್ಲಿರುವ ಕಾವೇರಿ ಗ್ರಾಮೀಣ ಬ್ಯಾಂಕ್ ನಲ್ಲಿ ದರೋಡೆ ನಡೆದಿದೆ. 12 ಕೆ ಜಿ ಚಿನ್ನ 5 ಲಕ್ಷದ 14 ಸಾವಿರ ದೋಚಿ ಪರಾರಿಯಾಗಿದ್ದಾರೆ ಖದೀಮರು. 3 ಕೋಟಿ 80 ಲಕ್ಷ  ಮೌಲ್ಯದ ಚಿನ್ನಾಭರಣ, ನಗದು ಕಳುವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.