ಅಕ್ರಮ ಹಣ ವರ್ಗಾವಣೆ: ರಾಬರ್ಟ್ ವಾದ್ರಾಗೆ ನಿರೀಕ್ಷಣಾ ಜಾಮೀನು!

Published : Apr 01, 2019, 07:10 PM IST
ಅಕ್ರಮ ಹಣ ವರ್ಗಾವಣೆ: ರಾಬರ್ಟ್ ವಾದ್ರಾಗೆ ನಿರೀಕ್ಷಣಾ ಜಾಮೀನು!

ಸಾರಾಂಶ

ರಾಬರ್ಟ್ ವಾದ್ರಾ ಹಾಗೂ ಅಪ್ತ  ಮನೋಜ್ ಅರೋರಾಗೆ ನಿರೀಕ್ಷಣಾ ಜಾಮೀನು| ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಸಿಬಿಐ ವಿಶೇಷ ನ್ಯಾಯಾಲಯ| ತಲಾ 5 ಲಕ್ಷ ರೂ. ಶ್ಯೂರಿಟಿಯ ಬಾಂಡ್ ಮೇಲೆ ನಿರೀಕ್ಷಣಾ ಜಾಮೀನು ಮಂಜೂರು| ನ್ಯಾಯಾಲಯಕ್ಕೆ ತಿಳಿಸದೇ ದೇಶ ಬಿಡುವಂತಿಲ್ಲ ಎಂಬ ಸೂಚನೆ| ಸಾಕ್ಷಿದಾರರ ಮೇಲೆ ಪ್ರಭಾವ ಬೀರದಂತೆ ನ್ಯಾಯಾಧೀಶರ ಆದೇಶ| 

ನವದೆಹಲಿ(ಏ.01): ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಹಾಗೂ ಅಪ್ತ  ಮನೋಜ್ ಅರೋರಾಗೆವಿಶೇಷ ಸಿಬಿಐ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ರಾಬರ್ಟ್ ವಾದ್ರಾ ಹಾಗೂ ಮನೋಜ್ ಅರೋರಾ  ತಲಾ 5 ಲಕ್ಷ ರೂ. ಶ್ಯೂರಿಟಿಯ ಬಾಂಡ್  ನೀಡಬೇಕು ಹಾಗೂ ನ್ಯಾಯಾಲಯಕ್ಕೆ ತಿಳಿಸದೇ ದೇಶದಿಂದ ಬೇರೆಡೆ ಹೋಗದಂತೆ  ಆದೇಶ ನೀಡಲಾಗಿದೆ.
ರಾಬರ್ಟ್ ವಾದ್ರಾ ಅವರಿಗೆ ಜಾಮೀನು ಮಂಜೂರು ಮಾಡಿರುವ  ಸಿಬಿಐ ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್, ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿದಾರರ ಮೇಲೆ ಪ್ರಭಾವ ಬೀರಕೂಡದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ರಾಬರ್ಟ್ ವಾದ್ರಾ ಲಂಡನ್  ಮೂಲದ ಸುಮಾರು 1.9 ಮಿಲಿಯನ್ ಪೌಂಡ್ ಮೊತ್ತದ ಆಸ್ತಿ ಖರೀದಿಯಲ್ಲಿ, ಅಕ್ರಮ ಹಣ ವರ್ಗಾವಣೆಯ ಆರೋಪ ಎದುರಿಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

sculptor makeup: ಹುಡುಗರೇ ಆಹಾ ಚೂಪಾದ ಮೂಗು ಎಂಥಾ ಬ್ಯೂಟಿ ಅಂತ ಮರುಳಾಗದಿರಿ ಜೋಕೆ..!
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾನಸಿಕ ಅಸ್ವಸ್ಥ ಎಂದ ಪಾಕಿಸ್ತಾನ ಸೇನೆ, ಕೋಲಾಹಲ ಶುರು