ಡಿಕೆಶಿ, ಚಿದು ಬಳಿಕ ಸೋನಿಯಾ ಅಳಿಯನಿಗೂ ಬಂಧನ ಭೀತಿ!

Published : Sep 27, 2019, 07:28 AM IST
ಡಿಕೆಶಿ, ಚಿದು ಬಳಿಕ ಸೋನಿಯಾ ಅಳಿಯನಿಗೂ ಬಂಧನ ಭೀತಿ!

ಸಾರಾಂಶ

ಡಿಕೆಶಿ, ಚಿದು ಬಳಿಕ ಸೋನಿಯಾ ಅಳಿಯನಿಗೂ ಬಂಧನ ಭೀತಿ| ವಾದ್ರಾ ವಶಕ್ಕೆ ಪಡೆದು ವಿಚಾರಣೆಗೆ ಅನುಮತಿ ಕೇಳಿದ ಇ.ಡಿ.| ವಿಚಾರಣೆ ನ.5ಕ್ಕೆ ಮುಂದೂಡಿಕೆಯಾಗಿದ್ದರಿಂದ ಸದ್ಯ ನಿರಾಳ

ನವದೆಹಲಿ[ಸೆ.27]: ಕಾಂಗ್ರೆಸ್ಸಿನ ಘಟಾನುಘಟಿ ನಾಯಕರಾದ ಪಿ. ಚಿದಂಬರಂ ಹಾಗೂ ಡಿ.ಕೆ. ಶಿವಕುಮಾರ್‌ ಅವರು ವಿವಿಧ ಆರೋಪಗಳಡಿ ಸಿಬಿಐ, ಜಾರಿ ನಿರ್ದೇಶನಾಲಯ (ಇ.ಡಿ.)ದಿಂದ ಬಂಧನಕ್ಕೆ ಒಳಗಾಗಿ, ತಿಹಾರ್‌ ಜೈಲು ಸೇರಿರುವಾಗಲೇ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯನಿಗೂ ಕೂಡ ಬಂಧನ ಭೀತಿ ಎದುರಾಗಿದೆ. ಲಂಡನ್‌ನಲ್ಲಿ 17 ಕೋಟಿ ರು. ವೆಚ್ಚದಲ್ಲಿ ಬಂಗಲೆ ಖರೀದಿಸಿದ ಆರೋಪ ಸಂಬಂಧ ವಿಚಾರಣೆಗೆ ಉದ್ಯಮಿ ರಾಬರ್ಟ್‌ ವಾದ್ರಾ ಸಹಕರಿಸುತ್ತಿಲ್ಲ. ಹೀಗಾಗಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಾಗಿದೆ ಎಂದು ದೆಹಲಿ ಹೈಕೋರ್ಟ್‌ನಲ್ಲಿ ಗುರುವಾರ ಇ.ಡಿ. ವಕೀಲರು ಮನವಿ ಮಾಡಿದ್ದಾರೆ.

ಲಂಡನ್‌ನ 12, ಬ್ರಯಾನ್‌ಸ್ಟನ್‌ ಸ್ಕೆ$್ವೕರ್‌ನಲ್ಲಿ 17 ಕೋಟಿ ರು. ವೆಚ್ಚದಲ್ಲಿ ಬಂಗಲೆ ಖರೀದಿ ಕುರಿತ ತನಿಖೆ ವೇಳೆ ಹಣ ವರ್ಗಾವಣೆ ಕೊಂಡಿ ವಾದ್ರಾ ಅವರ ಜತೆಗೇ ನೇರ ಥಳುಕು ಹಾಕಿಕೊಂಡಿದೆ. ಹೀಗಾಗಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಾಗಿದೆ ಎಂದು ಇ.ಡಿ. ವಕೀಲರು ನ್ಯಾ| ಚಂದ್ರಶೇಖರ್‌ ಮುಂದೆ ಬಿನ್ನವಿಸಿಕೊಂಡರು.

ಈ ವೇಳೆ ಇದಕ್ಕೆ ಆಕ್ಷೇಪ ಎತ್ತಿದ ವಾದ್ರಾ ಪರ ವಕೀಲರು, ತನಿಖಾ ಸಂಸ್ಥೆ ಕರೆದಾಗಲೆಲ್ಲಾ ತಮ್ಮ ಕಕ್ಷಿದಾರರು ವಿಚಾರಣೆಗೆ ಹಾಜರಾಗಿ ಸಹಕರಿಸಿದ್ದಾರೆ. ಕೇಳಿರುವ ಪ್ರಶ್ನೆಗಳಿಗೆಲ್ಲಾ ಉತ್ತರ ನೀಡಿದ್ದಾರೆ. ಆರೋಪಗಳನ್ನು ಒಪ್ಪಿಕೊಂಡಿಲ್ಲ ಎಂಬ ಕಾರಣಕ್ಕೆ ಅವರು ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ಹೇಳುವುದು ಸರಿಯಲ್ಲ ಎಂದು ವಾದಿಸಿದರು.

ಇದನ್ನು ಆಲಿಸಿದ ನ್ಯಾಯಾಲಯ, ಅಂತಿಮ ಹಂತದ ವಾದ ಮಂಡನೆಯನ್ನು ನ.5ಕ್ಕೆ ಮುಂದೂಡಿದೆ. ಇ.ಡಿ. ಪ್ರಕರಣ ಸಂಬಂಧ ವಿಚಾರಣಾ ನ್ಯಾಯಾಲಯದಲ್ಲಿ ವಾದ್ರಾ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ. ಅದನ್ನು ರದ್ದುಗೊಳಿಸಬೇಕು ಎಂದು ಇ.ಡಿ. ದೆಹಲಿ ಹೈಕೋರ್ಟ್‌ ಮೊರೆ ಹೋಗಿದೆ. ಆದರೆ ಪ್ರಕರಣದ ವಿಚಾರಣೆ ನ.5ಕ್ಕೆ ಮುಂದೂಡಿಕೆಯಾಗಿರುವುದರಿಂದ ವಾದ್ರಾ ಅಲ್ಲಿವರೆಗೂ ನಿರಾಳರಾಗುವಂತಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ