ಆಫ್ಘಾನಿಸ್ತಾನದಲ್ಲಿ ಭಾರತೀಯ ರಾಯಭಾರಿ ನಿವಾಸದ ಮೇಲೆ ಬಿದ್ದ ರಾಕೆಟ್..!

Published : Jun 06, 2017, 03:42 PM ISTUpdated : Apr 11, 2018, 01:07 PM IST
ಆಫ್ಘಾನಿಸ್ತಾನದಲ್ಲಿ ಭಾರತೀಯ ರಾಯಭಾರಿ ನಿವಾಸದ ಮೇಲೆ ಬಿದ್ದ ರಾಕೆಟ್..!

ಸಾರಾಂಶ

ಇಂದು ಕಾಬೂಲ್'ನಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಶಾಶ್ ದಾರಕ್ ಎಂಬಲ್ಲಿ ಸ್ಫೋಟವೊಂದು ಸಂಭವಿಸಿದೆ. ಆಫ್ಘಾನಿಸ್ತಾನದಲ್ಲಿ ಶಾಂತಿ ಪಾಲನೆ ಮಾಡುವ ಬಗ್ಗೆ 23 ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಿದ್ದ ಸಭೆಯಲ್ಲಿ ಸ್ಫೋಟವಾಗಿದೆ. ಆಫ್ಘಾನಿಸ್ತಾನ್ ಅಧ್ಯಕ್ಷ ಅಶ್ರಫ್ ಘನಿ ಈ ಸಭೆಯನ್ನು ಉದ್ಘಾಟಿಸಿದ್ದರು. ಸುದೈವವಶಾತ್, ಅಲ್ಲಿಯೂ ಯಾವುದೇ ಜೀವಹಾನಿಯಾದ ಬಗ್ಗೆ ವರದಿ ಬಂದಿಲ್ಲ.

ಕಾಬೂಲ್(ಜೂನ್ 06): ಇತ್ತೀಚೆಗಷ್ಟೇ ಭಾರತೀಯ ರಾಯಭಾರ ಕಚೇರಿ ಸಮೀಪ ಭೀಕರ ಕಾರ್ ಬಾಂಬ್ ಬಿದ್ದು 150ಕ್ಕೂ ಹೆಚ್ಚು ಜನ ಬಲಿತೆಗೆದುಕೊಂಡ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ದುರ್ಘಟನೆ ಸಂಭವಿಸಿದೆ. ಆಫ್ಘಾನಿಸ್ತಾನದ ರಾಜಧಾನಿಯಲ್ಲಿರುವ ಭಾರತೀಯ ರಾಯಭಾರಿಯ ನಿವಾಸದ ಮೇಲೆ ರಾಕೆಟ್'ವೊಂದು ಬಿದ್ದಿರುವುದು ಕಂಡುಬಂದಿದೆ. ಉಗ್ರರು ರಾಕೆಟ್ ದಾಳಿ ನಡೆಸಿರುವ ಶಂಕೆ ಇದೆ. ಮನೆಯ ಆವರಣದಲ್ಲಿರುವ ವಾಲಿಬಾಲ್ ಕೋರ್ಟ್'ನಲ್ಲಿ ಬೆಳಗ್ಗೆ 11:45ಕ್ಕೆ ರಾಕೆಟ್ ಪತನಗೊಂಡಿರುವುದು ತಿಳಿದುಬಂದಿದೆ. ಆದರೆ, ಮನೆಯಲ್ಲಿದ್ದ ಯಾರಿಗೂ ಯಾವುದೇ ಹಾನಿಯಾದ ಬಗ್ಗೆ ಮಾಹಿತಿ ಲಭಿಸಿಲ್ಲ.

ಶಾಂತಿ ಸಭೆ ಮೇಲೆ ಬಾಂಬ್?
ಇಂದು ಕಾಬೂಲ್'ನಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ಶಾಶ್ ದಾರಕ್ ಎಂಬಲ್ಲಿ ಸ್ಫೋಟವೊಂದು ಸಂಭವಿಸಿದೆ. ಆಫ್ಘಾನಿಸ್ತಾನದಲ್ಲಿ ಶಾಂತಿ ಪಾಲನೆ ಮಾಡುವ ಬಗ್ಗೆ 23 ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಿದ್ದ ಸಭೆಯಲ್ಲಿ ಸ್ಫೋಟವಾಗಿದೆ. ಆಫ್ಘಾನಿಸ್ತಾನ್ ಅಧ್ಯಕ್ಷ ಅಶ್ರಫ್ ಘನಿ ಈ ಸಭೆಯನ್ನು ಉದ್ಘಾಟಿಸಿದ್ದರು. ಸುದೈವವಶಾತ್, ಅಲ್ಲಿಯೂ ಯಾವುದೇ ಜೀವಹಾನಿಯಾದ ಬಗ್ಗೆ ವರದಿ ಬಂದಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಧರ್ಮಸ್ಥಳ ಪ್ರಕರಣ: ಶಿವಮೊಗ್ಗ ಜೈಲಿನಿಂದ ಇಂದು 'ಬುರುಡೆ ಚಿನ್ನಯ್ಯ' ಬಿಡುಗಡೆ, ಶ್ಯೂರಿಟಿ ಕೊಟ್ಟಿದ್ದು ಯಾರು?
India Latest News Live: ಬಿಹಾರ ಸೋಲಿನ ಬಳಿಕ ಪ್ರಶಾಂತ್ ಕಿಶೋರ್ - ಪ್ರಿಯಾಂಕಾ ಗಾಂಧಿ ರಹಸ್ಯ ಭೇಟಿ?