
ಬೆಂಗಳೂರು (ಫೆ.15): ಪುಲ್ವಾಮಾ ಉಗ್ರ ದಾಳಿಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ರಾಕಿಂಗ್ ಸ್ಟಾರ್ ಯಶ್ ಈ ಹೇಯ ಕೃತ್ಯವನ್ನು ಖಂಡಿಸಿದ್ದಾರೆ. ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ್ದಾರೆ.
22 ದಿನದ ಮಗು ನೋಡದ ಹುತಾತ್ಮ: ಪ್ರತಿಯೊಬ್ಬರದ್ದೂ ನೋವಿನ ಕತೆ
ನಮ್ಮ ದೇಶಕ್ಕೆ ಇದೊಂದು ಕೆಟ್ಟ ಘಳಿಗೆ. ನಾವು 44 ಯೋಧರನ್ನು ಕಳೆದುಕೊಂಡಿದ್ದೇವೆ. ಅವರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ. ಯೋಧರ ತ್ಯಾಗ, ಬಲಿದಾನವನ್ನು ಪದಗಳಲ್ಲಿ ಹಿಡಿದಿಡಲು ಸಾಧ್ಯವೇ ಇಲ್ಲ. ಭಯೋತ್ಪಾದಕರ ಈ ಕೃತ್ಯವನ್ನು ಖಂಡಿಸುತ್ತೇನೆ. ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದ್ದಾರೆ.
ಅಂತೂ ಹುತಾತ್ಮರಿಗೆ ನಮನ ಸಲ್ಲಿಸಿದ ಕೊಹ್ಲಿ!
ನಟ ಪ್ರಕಾಶ್ ರೈ ಈ ಕೃತ್ಯವನ್ನು ಖಂಡಿಸಿದ್ದಾರೆ. ಪುಲ್ವಾಮಾ ದಾಳಿ ಆಘಾತ ತಂದಿದೆ. ಈ ದುರಂತವನ್ನು ರಾಜಕೀಯಗೊಳಿಸಬೇಡಿ. ನಾಗರೀಕ ಸಮಾಜ ಹಾಗೂ ಸರ್ಕಾರ ಒಟ್ಟಾಗಿ ಪರಿಹಾರವನ್ನು ಹುಡುಕಬೇಕು ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.