
ವಿಜಯಪುರ(ಅ.08): ‘ರಾಜಕೀಯ ಕ್ಷೇತ್ರಕ್ಕೆ ನಾನು ಪ್ರವೇಶಿಸುವು ದಿಲ್ಲ. ಚಿತ್ರರಂಗದಿಂದ ಯಾರೇ ರಾಜಕೀಯಕ್ಕೆ ಬಂದರೂ ಅವರಿಗೆ ಬೆಂಬಲ ನೀಡುತ್ತೇನೆ’ ಎಂದು ಖ್ಯಾತ ಚಿತ್ರನಟ ‘ರಾಕಿಂಗ್ ಸ್ಟಾರ್; ಯಶ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕೀಯ ಕ್ಷೇತ್ರಕ್ಕೆ ನಾನು ಪ್ರವೇಶಿಸುವ ವಿಚಾರವೇ ಇಲ್ಲ ಎಂದರು. ಚಿತ್ರನಟ ಉಪೇಂದ್ರ ಅವರ ರಾಜಕೀಯ ಪ್ರವೇಶ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಯಶ್, ಚಿತ್ರರಂಗದಿಂದ ಯಾರೇ ರಾಜಕೀಯ ರಂಗ ಪ್ರವೇಶಿಸಿದರೂ ಅವರಿಗೆ ಬೆಂಬಲ ನೀಡುತ್ತೇನೆ. ಆದರೆ ನಾನು ರಾಜಕೀಯಕ್ಕೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಎಲ್ಲರೂ ಒಂದೇ ಜಾತಿ, ಎಲ್ಲರದೂ ಒಂದೇ ‘ರ್ಮ, ಅದೇ ಮಾನವ ಜಾತಿ, ಮಾನವೀಯ ಧರ್ಮ ಎಂದರು. ಇದೇ ವೇಳೆ ನಟಿ ರಾಧಿಕಾ ಪಂಡಿತ್ ಮಾತನಾಡಿ, ಮದುವೆ ನಂತರ ಮತ್ತೆ ಚಿತ್ರದಲ್ಲಿ ನಟಿಸುತ್ತೇನೆ, ರಾಕ್'ಲೈನ್ ಬ್ಯಾನರ್'ನಲ್ಲಿ ನಿರ್ಮಾಣಗೊಳ್ಳುತ್ತಿರುವ ಚಿತ್ರದಲ್ಲಿ ನಾಯಕ ನಟಿಯಾಗಿ ನಟಿಸಿದ್ದೇನೆ. ಎರಡನೇ ಸಾರಿ ವಿಜಯಪುರಕ್ಕೆ ಬಂದಿದ್ದೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.