
ಪಾಟ್ನಾ: ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಹತ್ಯೆ ಮಾಡಿರುವ ಆರೋಪ ಎದುರಿಸುತ್ತಿರುವ ಜೆಡಿಯು ನಾಯಕಿ ಮನೋರಮಾ ದೇವಿ ಪುತ್ರ ರಾಕಿ ಯಾದವ್ ಹಾಗೂ ಇನ್ನಿಬ್ಬರು ಆರೋಪಿಗಳಿಗೆ ಗಯಾ ಜಿಲ್ಲಾ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ಘೋಷಿಸಿದೆ.
ರಾಕಿ ಯಾದವ ತಂದೆ ಬಿಂದಿ ಯಾದವ್'ಗೆ ನ್ಯಾಯಾಲಯವು 5 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.
ತನ್ನ ಕಾರಿಗೆ ದಾರಿ ಕೊಡಲಿಲ್ಲ ಎಂಬ ಕಾರಣಕ್ಕೆ ರಾಕಿ ಯಾದವ್, ಆದಿತ್ಯ ಸಚದೇವ ಎಂಬ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆಗೈದಿದ್ದ ಘಟನೆ ಕಳೆದ ವರ್ಷ ಮೇ 7ರಂದು ಬಿಹಾರದ ಗಯಾದಲ್ಲಿ ನಡೆದಿತ್ತು.
ಕಳೆದ ಅಕ್ಟೋಬರ್ 19ರಂದು ಪಾಟ್ನಾ ಹೈಕೋರ್ಟ್ ಆರೋಪಿ ರಾಕಿ ಯಾದವ್’ಗೆ ಜಾಮೀನು ನೀಡಿತ್ತು. ಆದರೆ ಪಾಟ್ನಾ ಹೈಕೋರ್ಟ್ ನೀಡಿರುವ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಹಾಗೂ ಪ್ರಕರಣವನ್ನು ವಿಚಾರಣೆ ನಡೆಸಿ ಸೆ. 5ರೊಳಗೆ ತೀರ್ಪು ನೀಡುವಂತೆ ಸುಪ್ರೀಂ ಸೂಚಿಸಿತ್ತು.
ಕಳೆದ 15 ತಿಂಗಳುಗಳಲ್ಲಿ ಈ ಪ್ರಕರಣವು ಭಾರಿ ತಿರುವುಗಳನ್ನು ಪಡೆದುಕೊಂಡಿತ್ತು. ಪ್ರಕರಣದ 4 ಆರೋಪಿಗಳ ಪೈಕಿ 3 ಮಂದಿ ರಾಕಿ ಯಾದವ್ ಕುಟುಂಬಸ್ಥರೇ ಆಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.