ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯಿಂದ ಲೋಪ..!

Published : Feb 22, 2018, 11:07 AM ISTUpdated : Apr 11, 2018, 12:59 PM IST
ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯಿಂದ ಲೋಪ..!

ಸಾರಾಂಶ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಕೋವಿಂದ್ ಅವರು ಪಾಲ್ಗೊಂಡಿದ್ದ ಶ್ರವಣಬೆಳಗೊಳದ ಮಹಾ ಮಸ್ತಕಾಭಿಷೇಕ ಸಂಬಂಧಿ ಕಾರ್ಯಕ್ರಮಗಳ ಆಯೋಜನೆಯಲ್ಲಿ ಶಿಷ್ಟಾಚಾರ ಲೋಪವಾಗಿದ್ದು, ಈ ಬಗ್ಗೆ ಸ್ಪಷ್ಟನೆ ನೀಡುವಂತೆ ರಾಜಭವನವು ರಾಜ್ಯದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದೆ.

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಕೋವಿಂದ್ ಅವರು ಪಾಲ್ಗೊಂಡಿದ್ದ ಶ್ರವಣಬೆಳಗೊಳದ ಮಹಾ ಮಸ್ತಕಾಭಿಷೇಕ ಸಂಬಂಧಿ ಕಾರ್ಯಕ್ರಮಗಳ ಆಯೋಜನೆಯಲ್ಲಿ ಶಿಷ್ಟಾಚಾರ ಲೋಪವಾಗಿದ್ದು, ಈ ಬಗ್ಗೆ ಸ್ಪಷ್ಟನೆ ನೀಡುವಂತೆ ರಾಜಭವನವು ರಾಜ್ಯದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರಿಗೆ ಪತ್ರ ಬರೆದಿರುವ ರಾಜಭವನ ಕಚೇರಿ ಅಧಿಕಾರಿಗಳು, ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿ ಭೇಟಿ ವೇಳೆ ಸೂಕ್ತ ಶಿಷ್ಟಾಚಾರ ಪಾಲನೆ ಮಾಡಬೇಕು. ಈ ಬಗ್ಗೆ ಸ್ಥಳೀಯ ಜಿಲ್ಲಾಧಿಕಾರಿಗಳು ಖುದ್ದು ಜವಾಬ್ದಾರಿ ವಹಿಸಿಕೊಂಡು ಶಿಷ್ಟಾಚಾರ ಪಾಲನೆ ಯಾಗುವಂತೆ ಮಾಡಬೇಕು.

ಆದರೆ, ಇತ್ತೀಚೆಗೆ ರಾಷ್ಟ್ರಪತಿ ಪ್ರಧಾನಿ ಭೇಟಿ ವೇಳೆ ಹಲವು ಲೋಪಗಳು ಆಗಿವೆ. ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಕೋರಿದ್ದಾರೆ. ಮಹಾಮಸ್ತ ಕಾಭಿಷೇಕದದಲ್ಲಿ ರಾಷ್ಟ್ರಪತಿಗಳ ಸಾಲಿಗಿಂತ ಮುಂದೆ ಕುರ್ಚಿ ಹಾಕ ಲಾಗಿತ್ತು. ರಾಷ್ಟ್ರಪತಿಗಳ ಸರಿ ಸಮಾನವಾಗಿ ಯಾರೂ ನಿಲ್ಲಬಾರದು ಎಂಬ ನಿಯಮವಿದ್ದರೂ ಹಲವರಿಗೆ ನಿಲ್ಲಲು ಅವಕಾಶ ನೀಡಲಾಗಿತ್ತೆನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ಅಪ್ಪ- ಅಮ್ಮನ ವಿಚ್ಚೇಧನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!
ಟೊಯೋಟಾ ಹೈಡ್ರೋಜನ್ ಕಾರು ಮೂಲಕ ಸಂಸತ್‌ಗೆ ಬಂದ ಪ್ರಹ್ಲಾದ್ ಜೋಶಿ, ಇದರ ಲಾಭವೇನು?