
ಬೆಂಗಳೂರು: ಕಾಂಗ್ರೆಸ್ ರಾಜ್ಯ ಸರಕಾರ ಹಾಗೂ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ನಡುವಿನ ತಿಕ್ಕಾಟ ಮುಂದುವರಿಸಿದೆ. ಸಿಎಟಿ ಆದೇಶ ಪ್ರಶ್ನಿಸಿ ಇದೀಗ ಹೈಕೋರ್ಟ್ಗೆ ಮನವಿ ಸಲ್ಲಿಸಲಾಗಿದೆ.
ಎರಡು ವರ್ಷ ಕಡ್ಡಾಯವಾಗಿ ಕಾರ್ಯನಿರ್ವಹಿಸಲು ಕಾನೂನಿದೆ, ಇದರಿಂದ ವರ್ಗಾವಣೆ ಆದೇಶ ರದ್ದು ಮಾಡ ಬೇಕೆಂದು ರೋಹಿಣಿ ಹೈ ಕೋರ್ಟ್ ಮೊರೆ ಹೋಗಿದ್ದಾರೆ.
ರಾಜ್ಯ ಸರ್ಕಾರ ನಿಯಮ ಉಲ್ಲಂಘನೆ ಮಾಡಿದೆ. ಹಾಸನ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ಬಯಲಿಗೆಳೆದಿರುವುದೇ ವರ್ಗಾವಣೆಗೆ ಕಾರಣ. ಹಾಸನ ರಾಜಕಾರಣಿಗಳ ಒತ್ತಡದಿಂದ ಈ ವರ್ಗಾವಣೆ ಮಾಡಲಾಗಿದೆ. CAT ಕೂಡ ನ್ಯಾಯ ಸಮ್ಮತವಾದ ತೀರ್ಪು ನೀಡಿಲ್ಲ. ಮತ್ತೆ ಸಿಎಸ್ಗೆ ಮನವಿ ಸಲ್ಲಿಸಲು ಸೂಚಿಸಿ ಅರ್ಜಿ ಇತ್ಯರ್ಥಪಡಿಸಿದೆ, ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ಕೇಂದ್ರಿಯ ನ್ಯಾಯಮಂಡಳಿಯ ಕ್ರಮ ಸರಿಯಲ್ಲ. ಸರ್ಕಾರದ ಆದೇಶ ರದ್ದಿಗೆ ಹೈಕೋರ್ಟ್ನಲ್ಲಿ ರೋಹಿಣಿ ಮನವಿ ಸಲ್ಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.