‘ಬಿಎಸ್‌ವೈ ಆಪ್ತನೊಂದಿಗೆ ಪರಾರಿ ಆಗಲು ಯತ್ನಿಸಿದ ಕೈ ಅತೃಪ್ತ’

Published : Jul 16, 2019, 09:21 AM ISTUpdated : Jul 16, 2019, 01:15 PM IST
‘ಬಿಎಸ್‌ವೈ ಆಪ್ತನೊಂದಿಗೆ ಪರಾರಿ ಆಗಲು ಯತ್ನಿಸಿದ ಕೈ ಅತೃಪ್ತ’

ಸಾರಾಂಶ

ರಾಜೀನಾಮೆ ನೀಡಿ ನಡೆದಿರುವ ಕಾಂಗ್ರೆಸ್ ನಾಯಕರೋರ್ವರು ಬಿ ಎಸ್ ಯಡಿಯೂರಪ್ಪ ಆಪ್ತನ ಜೊತೆ ಪರಾರಿಯಾಗಲು ಯತ್ನಿಸಿದ್ದರೆನ್ನುವ ಆರೋಪ ಕೇಳಿ ಬಂದಿದೆ. 

ಬೆಂಗಳೂರು [ಜು.16] :  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಆಪ್ತ ಸಹಾಯಕ ಎಸ್‌.ಎನ್‌.ಸಂತೋಷ್‌ ಜೊತೆ ಪರಾರಿಯಾಗಲು ಯತ್ನಿಸಿದ್ದ ಶಾಸಕ ರೋಷನ್‌ ಬೇಗ್‌ ಅವರನ್ನು ಐಎಂಎ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

"

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮುಂಬೈಗೆ ಹೋಗಲು ರೋಷನ್‌ ಬೇಗ್‌ ಮುಂದಾಗಿದ್ದರು. ವಿಚಾರಣೆಗೆ ಎದುರಿಸುವ ಬದಲು ಸಂತೋಷ್‌ ಜತೆ ಮುಂಬೈಗೆ ಪರಾರಿಯಾಗಲು ಯತ್ನಿಸಿದರು. ಈ ವೇಳೆ ಮಾಜಿ ಶಾಸಕ ಯೋಗೇಶ್ವರ್‌ ಸಹ ಉಪಸ್ಥಿತರಿದ್ದರು. ಮಾಜಿ ಸಚಿವರು ಪರಾರಿಯಾಗಲು ಬಿಜೆಪಿ ಸಹಕರಿಸಿರುವುದು ಇದರಿಂದ ಗೊತ್ತಾಗುತ್ತದೆ. 

ರೋಷನ್‌ ಬೇಗ್‌ ಐಎಂಎ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದಾರೆ. ಆದರೂ ಅವರ ಪರಾರಿಯಾಗಲು ಬಿಜೆಪಿ ಸಹಕರಿಸಿದೆ ಎಂದು ಟ್ವೀಟರ್‌ನಲ್ಲಿ ಹೇಳಿದ್ದಾರೆ. ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಿರುವುದು ಇದರಿಂದ ಸಾಬೀತಾಗಿದೆ. ಕುದುರೆ ವ್ಯಾಪಾರ ಮಾಡಿ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಹಲವು ಪ್ರಯತ್ನ ಮಾಡುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC
ಪ್ರದರ್ಶನದ ವೇಳೆ ಝೂನಲ್ಲಿ ಆರೈಕೆ ಮಾಡ್ತಿದ್ದವರ ಮೇಲೆಯೇ ಕರಡಿ ಅಟ್ಯಾಕ್: ವೀಡಿಯೋ