ರಾಜ್ಯಸಭೆಯತ್ತ ಕಣ್ಣು ನೆಟ್ಟಿದ್ದಾರೆ ಹಾಲಿ ಸಚಿವರು..

Published : Mar 03, 2018, 12:18 PM ISTUpdated : Apr 11, 2018, 12:47 PM IST
ರಾಜ್ಯಸಭೆಯತ್ತ ಕಣ್ಣು ನೆಟ್ಟಿದ್ದಾರೆ ಹಾಲಿ ಸಚಿವರು..

ಸಾರಾಂಶ

ಹಾಲಿ ಶಾಸಕ, ಸಚಿವ ರೋಷನ್ ಬೇಗ್ ಈ ಕ್ಷೇತ್ರವನ್ನು ಮಗ ರುಮನ್ ಬೇಗ್‌ಗೆ ಬಿಟ್ಟು ಕೊಟ್ಟು, ರಾಜ್ಯಸಭೆಗೆ ಆಯ್ಕೆಯಾಗುವ ಇರಾದೆ ಹೊಂದಿದ್ದಾರೆ ಎಂಬ ಮಾತು ಹರಿದಾಡುತ್ತಿದೆ. ಆದರೆ, ಪಕ್ಷದ ಮೂಲಗಳ ಪ್ರಕಾರ ಪ್ರಸ್ತುತ ಚುನಾವಣೆಗೆ ರೋಷನ್‌ಬೇಗ್ ಅವರೇ ಅಭ್ಯರ್ಥಿ.

ಬೆಂಗಳೂರು : ಹಾಲಿ ಶಾಸಕ, ಸಚಿವ ರೋಷನ್ ಬೇಗ್ ಈ ಕ್ಷೇತ್ರವನ್ನು ಮಗ ರುಮನ್ ಬೇಗ್‌ಗೆ ಬಿಟ್ಟು ಕೊಟ್ಟು, ರಾಜ್ಯಸಭೆಗೆ ಆಯ್ಕೆಯಾಗುವ ಇರಾದೆ ಹೊಂದಿದ್ದಾರೆ ಎಂಬ ಮಾತು ಹರಿದಾಡುತ್ತಿದೆ. ಆದರೆ, ಪಕ್ಷದ ಮೂಲಗಳ ಪ್ರಕಾರ ಪ್ರಸ್ತುತ ಚುನಾವಣೆಗೆ ರೋಷನ್‌ಬೇಗ್ ಅವರೇ ಅಭ್ಯರ್ಥಿ.

ಬಿಜೆಪಿಯಿಂದ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು, ಮಾಜಿ ಶಾಸಕ ನಿರ್ಮಲ್‌ಕುಮಾರ್ ಸುರಾನಾ ಹಾಗೂ ಸ್ಥಳೀಯ ಮುಖಂಡ ಗೋಪಿ ಹೆಸರುಗಳು ಕೇಳಿಬರುತ್ತಿವೆ. ಕಟ್ಟಾ ಅವರಿಗೆ ಟಿಕೆಟ್ ಕೊಟ್ಟಲ್ಲಿ ರೋಷನ್ ಬೇಗ್ ಅವರಿಗೆ ಪ್ರಬಲ ಸ್ಪರ್ಧೆ ಒಡ್ಡುವ ಅವಕಾಶವಿದೆ ಎಂಬ ಅಭಿಪ್ರಾಯವನ್ನು ವರಿಷ್ಠರಿಗೆ ರವಾನಿಸಲಾಗಿದೆ.

ಭ್ರಷ್ಟಾಚಾರದ ಆರೋಪದ ಮೇಲೆ ಜೈಲಿಗೆ ಹೋಗಿ ಬಂದಿದ್ದಾರೆ ಎಂಬ ಕಳಂಕದ ಭೀತಿ ಎದುರಾದಲ್ಲಿ ಸುರಾನಾ ಅಥವಾ ಹೊಸಮುಖ ಗೋಪಿಗೆ ಅವಕಾಶ ನೀಡುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ. ಜೆಡಿಎಸ್‌ನಿಂದ ಪ್ರಬಲ ಹುರಿಯಾಳುಗಳಿಗೆ ಹುಡುಕಾಟ ನಡೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!