ಮೋದಿಯನ್ನು ಸೂ..ಮಗ ಅಂತಾರೆ: ಸಚಿವ ರೋಷನ್ ಬೇಗ್ ವಿವಾದಿತ ಹೇಳಿಕೆ

Published : Oct 13, 2017, 02:07 PM ISTUpdated : Apr 11, 2018, 12:41 PM IST
ಮೋದಿಯನ್ನು ಸೂ..ಮಗ ಅಂತಾರೆ: ಸಚಿವ ರೋಷನ್ ಬೇಗ್ ವಿವಾದಿತ ಹೇಳಿಕೆ

ಸಾರಾಂಶ

"ರಾಜ್ಯದ ಜನರನ್ನು ಸಿಎಂ ಸಿದ್ರಾಮಯ್ಯ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ಅನ್ನಭಾಗ್ಯ, ಚಿಕ್ಕ ಮಕ್ಕಳಿಗೆ ಶಾಲೆಯಲ್ಲಿ ಹಾಲು ಕೊಡುವ ಕ್ಷೀರ ಭಾಗ್ಯ ಯೋಜನೆ ಜಾರಿಗೆ ತಂದಿದ್ದಾರೆ. ನಿನ್ನೆ ಸಹ ಹೊಸ ಯೋಜನೆ ಆರಂಭಿಸಿದ್ದಾರೆ. ಗರ್ಭಿಣಿಯರಿಗೆ ಬಿಸಿಯೂಟ ನೀಡುವ ಯೋಜನೆ ಕೊಟ್ಟಿದ್ದಾರೆ. ಮೋದಿ ಇಂತಹ ಜನಪರ ಯೋಜನೆ ಮಾಡೋದು ಬಿಟ್ಟು, ಸುಮ್ಮನೆ ಮೈಕ್​ ಹಿಡ್ಕೊಂದು ಮನ್​ ಕಿ ಬಾತ್, ಮನ್​ ಕಿ ಬಾತ್​ ಅಂತ ಓಳ್​ ಬಿಡೋದೆಲ್ಲ ಬೇಡ," ಎಂದು ನಗರಾಭಿವೃದ್ಧಿ ಸಚಿವರು ಟೀಕಿಸಿದ್ದಾರೆ.

ಬೆಂಗಳೂರು(ಅ. 13): ಪ್ರಧಾನಿ ಮೋದಿ ವಿರುದ್ಧ ಸಚಿವ ರೋಷನ್ ಬೇಗ್ ರೋಷಾವೇಶದ ಮಾತುಗಳನ್ನಾಡಿದ್ದಾರೆ. ಅಧಿಕಾರಕ್ಕೆ ಬಂದ ಬಳಿಕ ಎಲ್ಲರೂ 'ನಮ್ಮ ಮೋದಿ ನಮ್ಮ ಮೋದಿ' ಅಂತ ಹೊಗಳುತ್ತಿದ್ದರು. ಅಧಿಕಾರಕ್ಕೆ ಕೂಡಿಸಿದ ಜನರೇ ಈಗ ಮೋದಿಯನ್ನು ಶಪಿಸುತ್ತಿದ್ದಾರೆ ಎಂದು ಸಚಿವರು ಹೇಳಿದ್ದಾರೆ. "ನೋಟ್ ಬ್ಯಾನ್ ಮಾಡಿದ ಮೇಲೆ ಏನಾಯ್ತು? ಜನರು 'ಈ ಸೂ.. ಮಗ ಏನೆಲ್ಲಾ ಮಾಡಿಬಿಟ್ಟ' ಎಂದು ಬೈಯುತ್ತಿದ್ದಾರೆ" ಎಂದು ರೋಷನ್ ಬೇಗ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷ ಇಡೀ ಭಾರತ ದೇಶವನ್ನು ಅಭಿವೃದ್ಧಿಪಡಿಸಿತ್ತು. ಇಂದಿರಾಗಾಂಧಿ ತಮ್ಮ ಬದುಕನ್ನೇ ದೇಶಕ್ಕಾಗಿ ಮುಡಿಪಾಗಿಟ್ಟರು. ರಾಜೀವ್ ಗಾಂಧಿ ಕೂಡ ತಮ್ಮ ಜೀವನ ತ್ಯಾಗ ಮಾಡಿದರು. ಆದರೆ ಈಗ ಅವರ ಮಗ ರಾಹುಲ್ ಗಾಂಧಿಯನ್ನು ಮಾತ್ರ ಬಾಯಿಗೆ ಬಂದಂತೆ ಬೈಯುತ್ತಿದ್ದಾರೆ ಎಂದು ರೋಷನ್ ಬೇಗ್ ವಿಷಾದ ವ್ಯಕ್ತಪಡಿಸಿದ್ದಾರೆ.

ಮೋದಿ ಓಳು:
"ರಾಜ್ಯದ ಜನರನ್ನು ಸಿಎಂ ಸಿದ್ರಾಮಯ್ಯ ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ಅನ್ನಭಾಗ್ಯ, ಚಿಕ್ಕ ಮಕ್ಕಳಿಗೆ ಶಾಲೆಯಲ್ಲಿ ಹಾಲು ಕೊಡುವ ಕ್ಷೀರ ಭಾಗ್ಯ ಯೋಜನೆ ಜಾರಿಗೆ ತಂದಿದ್ದಾರೆ. ನಿನ್ನೆ ಸಹ ಹೊಸ ಯೋಜನೆ ಆರಂಭಿಸಿದ್ದಾರೆ. ಗರ್ಭಿಣಿಯರಿಗೆ ಬಿಸಿಯೂಟ ನೀಡುವ ಯೋಜನೆ ಕೊಟ್ಟಿದ್ದಾರೆ. ಮೋದಿ ಇಂತಹ ಜನಪರ ಯೋಜನೆ ಮಾಡೋದು ಬಿಟ್ಟು, ಸುಮ್ಮನೆ ಮೈಕ್​ ಹಿಡ್ಕೊಂದು ಮನ್​ ಕಿ ಬಾತ್, ಮನ್​ ಕಿ ಬಾತ್​ ಅಂತ ಓಳ್​ ಬಿಡೋದೆಲ್ಲ ಬೇಡ," ಎಂದು ನಗರಾಭಿವೃದ್ಧಿ ಸಚಿವರು ಟೀಕಿಸಿದ್ದಾರೆ.

ಬಿಎಸ್'ವೈಗೆ ಟಾಂಗ್:
"ನಾವು 5 ರೂಪಾಯಿಗೆ ಬ್ರೇಕ್​ ಫಾಸ್ಟ್, 10 ರೂಪಾಯಿಗೆ ಊಟ ಕೊಡ್ತೀದ್ದೀವಿ. ನೀವ್ಯಾಕೆ ಇದನ್ನೆಲ್ಲ ಕೊಡಲಿಲ್ಲ? ಯಡಿಯೂರಪ್ಪ ಸಿಎಂ ಆಗಿದ್ದಾಗ ಜನರಿಗೆ ಇದೆನ್ನೆಲ್ಲ ಯಾಕೆ ಕೊಡಲಿಲ್ಲ? ಯಡಿಯೂರಪ್ಪ ಬರೀ ಶೋಭಾ ಕರಂದ್ಲಾಜೆ ನೋಡ್ಕೊಂಡು ನಿಂತಿದ್ದರು" ಎಂದು ರೋಷನ್ ಬೇಗ್ ವ್ಯಂಗ್ಯವಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಾಟಾದ ತಾಜ್‌, ಐಟಿಸಿಗೆ ಅದಾನಿ ಗ್ರೂಪ್ ಟಕ್ಕರ್, ಐಷಾರಾಮಿ ಹೋಟೆಲ್‌ ಉದ್ಯಮಕ್ಕೆ ಎಂಟ್ರಿ, ಏರ್ಪೋರ್ಟ್‌ಗಳೇ ಟಾರ್ಗೆಟ್!
ಬೆಂಗಳೂರು ಕಾಲೇಜಿನಲ್ಲಿ ಹಾಜರಾತಿ ಹಗರಣ; ಅಲಯನ್ಸ್ ವಿವಿ ದೂರು, 6 ಜನರ ವಿರುದ್ಧ ಎಫ್‌ಐಆರ್!