
ಇತ್ತೀಚೆಗಷ್ಟೆ ಜೈಲಿನಿಂದ ಬಿಡುಗಡೆಯಾಗಿದ್ದ ರೌಡಿ ಮೇಲೆ ಮತ್ತೊಂದು ರೌಡಿಗಳ ತಂಡ ದಾಳಿ ನಡೆಸಿ ಕೊಲೆಗೆ ಯತ್ನಿಸಿರೋ ಘಟನೆ ಮಂಡ್ಯದಲ್ಲಿ ನಡೆದಿದೆ. ಮಾದರಹಳ್ಳ ಗ್ರಾಮದ ಅಶೋಕ್ ಪೈ ಎಂಬಾತ ರೌಡಿಶೀಟರ್ ಜಡೇಜಾ ರವಿ ಕೊಲೆ ಪ್ರಕರಣದಲ್ಲಿ ಜೈಲು ಸೇ ರಿದ್ದ. ಇತ್ತೀಚೆಗಷ್ಟೆ ನ್ಯಾಯಾಲಯದಲ್ಲಿ ಪ್ರಕರಣ ಖುಲಾಸೆಗೊಂಡಿದ್ದರಿಂದ ಬಿಡುಗಡೆಗೊಂಡಿದ್ದ. ಇನ್ನು ನಿನ್ನೆ ತಡರಾತ್ರಿ 2 ಗಂಟೆಗೆ ಮನೆಯಲ್ಲಿ ಮಲಗಿದ್ದಾಗ 12 ಜನರ ತಂಡ ಏಕಾಏಕಿ ಮನೆಯ ಮೇಲೆ ದಾಳಿ ನಡೆಸಿದೆ. ಬಾಗಿಲು ಮುರಿದು ಕೊಲೆಗೆ ಯತ್ನಿಸಲಾಗಿದೆ. ಸುಮಾರು 30 ನಿಮಿಷ ರೌಡಿಗಳೊಂದಿಗೆ ಸೆಣಸಾಡಿದ ಅಶೋಕ್ ಪೈ, ಕೊನೆಗೂ ರೌಡಿಗಳಿಂದ ತಪ್ಪಿಸಿಕೊಂಡಿದ್ದಾನೆ. ವಿಷಯ ತಿಳಿದು ಕೆ.ಎಂ.ದೊಡ್ಡಿ ಪೊಲೀಸರು ಸ್ಥಳಕ್ಕಾಮಿಸುತ್ತಿದ್ದಂತೆ ರೌಡಿಗಳ ತಂಡ ಲಾಂಗ್ , ಮೊಬೈಲ್ ಬಿಟ್ಟು ಪರಾರಿಯಾಗಿದೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಕೊಲೆಗೆ ಯತ್ನಿಸಿದವರ ಪತ್ತೆಗೆ ಬಲೆ ಬೀಸಿದ್ದಾರೆ..
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.